ಮಂಡ್ಯ

ಮಂಡ್ಯ| ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ: ಡಾ: ಕುಮಾರ

ಮಂಡ್ಯ: ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಕ್ಕಿಂತ ಹೆಚ್ಚಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟಪಡಿಸಿದರು.

ಗುರುವಾರ(ಜು.18) ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ಕೆ.ಆರ್.ಎಸ್ ನಲ್ಲಿ ಒಳ ಹರಿವು ಹೆಚ್ಚಿದೆ. ಕೃಷಿ ಸಚಿವರು ಸಹ ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಬಗ್ಗೆ ತಿಳಿಸಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ ವಿತರಣೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ರೈತರಲ್ಲಿ ಯಾವುದೇ ಆತಂಕ ಬೇಡ ಎಂದು ಅವರು ಹೇಳಿದರು.

2024-25 ನೇ ಸಾಲಿನ ಪೂರ್ವ ಮುಂಗಾರಿಗೆ ಸಂಬಂಧಿಸಿದಂತೆ 14,60,913 ತಾಕುಗಳ ಬೆಳೆ ಸಮೀಕ್ಷೆ ನಡೆಸಬೇಕಿದ್ದು, 687535 ತಾಕುಗಳ ಬೆಳೆ ಸಮೀಕ್ಷೆ ನಡೆಸಿ ಶೇ 47.06 ಸಾಧನೆಯಾಗಿದೆ. ಬೆಳೆ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಿ ಒಂದು ವಾರದೊಳಗೆ ಶೇ 100 ರಷ್ಟು ಸಾಧನೆಯಾಗಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು ಮಾತನಾಡಿ, ಕೃಷಿ ಅಧಿಕಾರಿಗಳು ರೈತರಿಗೆ ಹಸಿರು, ಜೈವಿಕ ಹಾಗೂ ರಾಸಾಯನಿಕ ಗೊಬ್ಬರಗಳ ಬಳಕೆಯ ಉಪಯುಕ್ತತೆಯ ಬಗ್ಗೆ ಅರಿವು ಮೂಡಿಸಿ ಹೆಚ್ಚು ಬಳಸುವಂತೆ ಪ್ರೇರೇಪಿಸಬೇಕು ಎಂದರು.

ಜಿಲ್ಲೆಯಲ್ಲಿ 9996 ಕ್ವಿಂಟಲ್ ಭತ್ತ ಬೇಡಿಕೆ ಇದ್ದು, 10764 ಕ್ವಿಂಟಾಲ್ ಭತ್ತ ದಾಸ್ತಾನು ಇದೆ. ರಾಗಿ 985 ಕ್ವಿಂಟಾಲ್ ಬೇಡಿಕೆ ಇದ್ದು, 1538 ಕ್ವಿಂಟಾಲ್ ದಾಸ್ತಾನು ಇದೆ. ವಿವಿಧ ರಸಗೊಬ್ಬರ ಒಟ್ಟು 54,844 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಅಶೋಕ್ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್, ಕೃಷಿ ಇಲಾಖೆ ಉಪನಿರ್ದೇಶಕರಾದ ಮಾಲತಿ, ಮಮತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago