ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಾದೇವಪುರ ಬೋರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಗೆ ಬಟ್ಟೆ ಒಗೆಯಲು ಮತ್ತು ಪಾತ್ರೆ ತೊಳೆಯಲು ಬಂದಿದ್ದ ಆರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಈ ವೇಳೆ ಮೂವರನ್ನು ಸ್ಥಳೀಯರು ಕಾಲುವೆಯಿಂದ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಮೈಸೂರಿನ ಉದಯಗಿರಿ ಶಾಲೆಯೊಂದರಲ್ಲಿ ಓದುತ್ತಿದ್ದ 15 ವಿದ್ಯಾರ್ಥಿಗಳು ಹಾಗೂ ಇತರೆ ನಾಲ್ವರು ಟಾಟಾ ಏಸ್ನಲ್ಲಿ ನಾಲೆಗೆ ಬಟ್ಟೆ ಹಾಗೂ ಪಾತ್ರೆ ತೊಳೆಯಲು ಬಂದಿದ್ದರು.
ಇದನ್ನು ಓದಿ: ಮೈಸೂರು: ವಾಕಿಂಗ್ ಮಾಡುವಾಗಲೇ ವ್ಯಕ್ತಿ ಸಾವು
ಪಾತ್ರೆಗಳನ್ನು ಮುಳುಗಿಸಿ ತೆಗೆಯುವಾಗ ಓರ್ವ ಹುಡುಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಆತನನ್ನು ರಕ್ಷಿಸಲು ಆರು ಮಂದಿ ನಾಲೆಗೆ ಇಳಿದಿದ್ದಾರೆ.
ಈ ವೇಳೆ ಅವರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಸ್ಥಳದಲ್ಲಿದ್ದ ಸ್ಥಳೀಯರು ಮೂವರನ್ನು ರಕ್ಷಣೆ ಮಾಡಿದ್ದಾರೆ. ಅದರಲ್ಲಿ ಓರ್ವ ಬಾಲಕಿ ಸಾವನ್ನಪ್ಪಿದ್ದು, ಮತ್ತಿಬ್ಬರು ಬಾಲಕರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವಿದ್ಯಾರ್ಥಿಗಳಿಗಾಗಿ ಇಂದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





