Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಮಂಡ್ಯ| ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಮೂವರು ವಿದ್ಯಾರ್ಥಿನಿಯರು ನೀರುಪಾಲು: ಬಾಲಕಿ ಸಾವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಾದೇವಪುರ ಬೋರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಗೆ ಬಟ್ಟೆ ಒಗೆಯಲು ಮತ್ತು ಪಾತ್ರೆ ತೊಳೆಯಲು ಬಂದಿದ್ದ ಆರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಈ ವೇಳೆ ಮೂವರನ್ನು ಸ್ಥಳೀಯರು ಕಾಲುವೆಯಿಂದ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಮೈಸೂರಿನ ಉದಯಗಿರಿ ಶಾಲೆಯೊಂದರಲ್ಲಿ ಓದುತ್ತಿದ್ದ 15 ವಿದ್ಯಾರ್ಥಿಗಳು ಹಾಗೂ ಇತರೆ ನಾಲ್ವರು ಟಾಟಾ ಏಸ್‌ನಲ್ಲಿ ನಾಲೆಗೆ ಬಟ್ಟೆ ಹಾಗೂ ಪಾತ್ರೆ ತೊಳೆಯಲು ಬಂದಿದ್ದರು.

ಇದನ್ನು ಓದಿ: ಮೈಸೂರು: ವಾಕಿಂಗ್ ಮಾಡುವಾಗಲೇ ವ್ಯಕ್ತಿ ಸಾವು

ಪಾತ್ರೆಗಳನ್ನು ಮುಳುಗಿಸಿ ತೆಗೆಯುವಾಗ ಓರ್ವ ಹುಡುಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಆತನನ್ನು ರಕ್ಷಿಸಲು ಆರು ಮಂದಿ ನಾಲೆಗೆ ಇಳಿದಿದ್ದಾರೆ.

ಈ ವೇಳೆ ಅವರು ಕೂಡ  ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಸ್ಥಳದಲ್ಲಿದ್ದ ಸ್ಥಳೀಯರು ಮೂವರನ್ನು ರಕ್ಷಣೆ ಮಾಡಿದ್ದಾರೆ. ಅದರಲ್ಲಿ ಓರ್ವ ಬಾಲಕಿ ಸಾವನ್ನಪ್ಪಿದ್ದು, ಮತ್ತಿಬ್ಬರು ಬಾಲಕರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವಿದ್ಯಾರ್ಥಿಗಳಿಗಾಗಿ ಇಂದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸಂಬಂಧ ಅರಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!