ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಾದೇವಪುರ ಬೋರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಗೆ ಬಟ್ಟೆ ಒಗೆಯಲು ಮತ್ತು ಪಾತ್ರೆ ತೊಳೆಯಲು ಬಂದಿದ್ದ ಆರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಈ ವೇಳೆ ಮೂವರನ್ನು ಸ್ಥಳೀಯರು ಕಾಲುವೆಯಿಂದ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಮೈಸೂರಿನ ಉದಯಗಿರಿ ಶಾಲೆಯೊಂದರಲ್ಲಿ ಓದುತ್ತಿದ್ದ 15 ವಿದ್ಯಾರ್ಥಿಗಳು ಹಾಗೂ ಇತರೆ ನಾಲ್ವರು ಟಾಟಾ ಏಸ್ನಲ್ಲಿ ನಾಲೆಗೆ ಬಟ್ಟೆ ಹಾಗೂ ಪಾತ್ರೆ ತೊಳೆಯಲು ಬಂದಿದ್ದರು.
ಇದನ್ನು ಓದಿ: ಮೈಸೂರು: ವಾಕಿಂಗ್ ಮಾಡುವಾಗಲೇ ವ್ಯಕ್ತಿ ಸಾವು
ಪಾತ್ರೆಗಳನ್ನು ಮುಳುಗಿಸಿ ತೆಗೆಯುವಾಗ ಓರ್ವ ಹುಡುಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಆತನನ್ನು ರಕ್ಷಿಸಲು ಆರು ಮಂದಿ ನಾಲೆಗೆ ಇಳಿದಿದ್ದಾರೆ.
ಈ ವೇಳೆ ಅವರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಸ್ಥಳದಲ್ಲಿದ್ದ ಸ್ಥಳೀಯರು ಮೂವರನ್ನು ರಕ್ಷಣೆ ಮಾಡಿದ್ದಾರೆ. ಅದರಲ್ಲಿ ಓರ್ವ ಬಾಲಕಿ ಸಾವನ್ನಪ್ಪಿದ್ದು, ಮತ್ತಿಬ್ಬರು ಬಾಲಕರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವಿದ್ಯಾರ್ಥಿಗಳಿಗಾಗಿ ಇಂದು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…