ಮಂಡ್ಯ

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ಹೀಗಾಗಿ ತಾಯಿ ಚಿರತೆಯನ್ನು ಸೆರೆ ಹಿಡಿದು ಅದರೊಂದಿಗೆ ಮರಿಗಳನ್ನು ಸೇರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.

ಬೂತನಹೊಸೂರು ಗ್ರಾಮದ ನಿವಾಸಿ ಧರ್ಮರಾಜು ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಕಂಡು ಬಂದಿವೆ. ಆ ವೇಳೆ ರೈತರು ಚಿರತೆ ಮರಿಗಳನ್ನು ಹಿಡಿದು ಚೀಲವೊಂದರಲ್ಲಿ ಹಾಕಿ ಅರಣ್ಯ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ.

ಆರ್‌ಎಫ್‌ಒ ಶೈಲಜಾ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯು ಚಿರತೆ ಕಾರ್ಯಪಡೆ ಸಿಬ್ಬಂದಿಯೊಂದಿಗೆ ಬೋನನ್ನು ತಂದು ಚಿರತೆ ಮರಿಗಳನ್ನು ರಕ್ಷಿಸಿದ್ದಾರೆ.

ತಾಯಿಯಿಂದ ಬೇರ್ಪಟ್ಟ ಚಿರತೆ ಮರಿಗಳನ್ನು ತಾಯಿಯೊಂದಿಗೆ ಸೇರಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇ ಸ್ಥಳದಲ್ಲಿ ಚಿರತೆ ಕೇಜ್‌ನ್ನು ಇಟ್ಟು ಅದರೊಳಗೆ ಮರಿಗಳನ್ನು ಬಿಟ್ಟಿದ್ದಾರೆ. ಚಿರತೆಗಳು ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಇದರೊಂದಿಗೆ ಕಬ್ಬಿನ ಗದ್ದೆಗಳಲ್ಲಿ ಚಿರತೆಗಳು ಮರಿ ಹಾಕುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದರಿಂದ ರೈತರು ಭಯಭೀತಗೊಂಡಿದ್ದಾರೆ. ಹೀಗಾಗಿ ಚಿರತೆ ಸೆರೆಗೆ ಕ್ರಮ ವಹಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತಾಯಿ ಚಿರತೆಯು ಮರಿಗಳನ್ನು ಬಿಟ್ಟು ಹೋಗುವಂತಿಲ್ಲ. ಚಿರತೆ ಕೇಜ್‌ನಲ್ಲಿ ಮರಿಗಳನ್ನು ಹಾಕಿಟ್ಟು, ತಾಯಿಯೊಂದಿಗೆ ಸೇರಿಸುವ ಪ್ರಯತ್ನ ಮಾಡಿದ್ದೇವೆ ಎಂದು ವಲಯ ಅರಣ್ಯಾಧಿಕಾರಿ ಶೈಲಜಾ ಅವರು ತಿಳಿಸಿದರು. ಮರಿಗಳನ್ನು ಕಂಡು ಚಿರತೆ ಗೇಜ್‌ನೊಳಗೆ ತಾಯಿ ಚಿರತೆ ನುಗ್ಗಿದರೆ ಅದರೊಳಗೆ ಸೆರೆಯಾಗುತ್ತದೆ. ಆಗ ಕೆಲವು ದಿನಗಳು ತಾಯಿ ಚಿರತೆ ಹಾಗೂ ಮರಿಗಳನ್ನು ಒಟ್ಟಿಗೆ ಇಟ್ಟು, ಸಿಸಿ ಟಿವಿ ಕ್ಯಾಮೆರಾ ಮೂಲಕ ಅವುಗಳ ವರ್ತನೆ ಮೇಲೆ ನಿಗಾ ವಹಿಸಲಾಗುತ್ತದೆ. ಮರಿಗಳನ್ನು ತಾಯಿಯು ಹತ್ತಿರ ಸೇರದಿದ್ದರೆ ಇಲಾಖೆಯ ನಿಯಮಗಳಂತೆ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago