ಮಂಡ್ಯ

ಮಂಡ್ಯ| ಕುತ್ತಿಗೆಗೆ ಹಗ್ಗ ಹಾಕಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳ ಬಂಧನ

ಮಂಡ್ಯ: ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಮಂಡ್ಯ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದು, ಹಣ ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳು ರಾಬರಿಗೆ ಇಳಿದಿದ್ದರು. ಬಂಧಿತರನ್ನು ಕಿರಣ್‌, ಕುಶಾಲ್‌ ಬಾಬು, ಗೋಕುಲ್‌ ಎಂದು ಗುರುತಿಸಲಾಗಿದೆ.

ಸಾರ್ವಜನಿಕರ ಕುತ್ತಿಗೆಗೆ ಹಗ್ಗೆ ಹಾಕಿ ಅವರನ್ನು ಹೆದರಿಸಿ ಅವರ ಬಳಿ ಇರುವ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.

ಬ್ಯುಸಿನೆಸ್‌ ನೆಪದಲ್ಲಿ ಒಂದಾಗಿದ್ದ ಮೂವರು ದರೋಡೆ ಮಾಡಲು ಹೊರ ರಾಜ್ಯದ ಕಾರನ್ನು ಬಾಡಿಗೆಗೆ ಪಡೆದಿದ್ದರು.

ಕೆಂಗೇರಿ ಬಸ್‌ ನಿಲ್ದಾಣದ ಬಳಿ ಬಸ್‌ ಕಾಯುವವರೇ ಇವರ ಟಾರ್ಗೆಟ್‌ ಆಗಿದ್ದರು. ಡ್ರಾಪ್‌ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಹೋಗುತ್ತಿದ್ದರು. ಮಂಡ್ಯ ಬರುತ್ತಿದ್ದಂತೆ ಅವರ ಕುತ್ತಿಗೆಗೆ ಹಗ್ಗ ಹಾಕಿ ಅವರನ್ನು ಬೆದರಿಸಿ ಅವರ ಬಳಿ ಇದ್ದ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.

ಬಂದ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದರು. ಸದ್ಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಚಾ.ಬೆಟ್ಟದ ತಪ್ಪಲಿನಲ್ಲಿ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಸಸ್ಯ ಸಂಕುಲ ಹಾನಿ

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…

8 hours ago

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…

9 hours ago

ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…

10 hours ago

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…

10 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…

10 hours ago

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು…

11 hours ago