arrest
ಮಂಡ್ಯ: ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಮಂಡ್ಯ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದು, ಹಣ ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳು ರಾಬರಿಗೆ ಇಳಿದಿದ್ದರು. ಬಂಧಿತರನ್ನು ಕಿರಣ್, ಕುಶಾಲ್ ಬಾಬು, ಗೋಕುಲ್ ಎಂದು ಗುರುತಿಸಲಾಗಿದೆ.
ಸಾರ್ವಜನಿಕರ ಕುತ್ತಿಗೆಗೆ ಹಗ್ಗೆ ಹಾಕಿ ಅವರನ್ನು ಹೆದರಿಸಿ ಅವರ ಬಳಿ ಇರುವ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.
ಬ್ಯುಸಿನೆಸ್ ನೆಪದಲ್ಲಿ ಒಂದಾಗಿದ್ದ ಮೂವರು ದರೋಡೆ ಮಾಡಲು ಹೊರ ರಾಜ್ಯದ ಕಾರನ್ನು ಬಾಡಿಗೆಗೆ ಪಡೆದಿದ್ದರು.
ಕೆಂಗೇರಿ ಬಸ್ ನಿಲ್ದಾಣದ ಬಳಿ ಬಸ್ ಕಾಯುವವರೇ ಇವರ ಟಾರ್ಗೆಟ್ ಆಗಿದ್ದರು. ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಹೋಗುತ್ತಿದ್ದರು. ಮಂಡ್ಯ ಬರುತ್ತಿದ್ದಂತೆ ಅವರ ಕುತ್ತಿಗೆಗೆ ಹಗ್ಗ ಹಾಕಿ ಅವರನ್ನು ಬೆದರಿಸಿ ಅವರ ಬಳಿ ಇದ್ದ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.
ಬಂದ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದರು. ಸದ್ಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…