ಮಂಡ್ಯ

ಮಂಡ್ಯ| ಕುತ್ತಿಗೆಗೆ ಹಗ್ಗ ಹಾಕಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳ ಬಂಧನ

ಮಂಡ್ಯ: ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಮಂಡ್ಯ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದು, ಹಣ ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳು ರಾಬರಿಗೆ ಇಳಿದಿದ್ದರು. ಬಂಧಿತರನ್ನು ಕಿರಣ್‌, ಕುಶಾಲ್‌ ಬಾಬು, ಗೋಕುಲ್‌ ಎಂದು ಗುರುತಿಸಲಾಗಿದೆ.

ಸಾರ್ವಜನಿಕರ ಕುತ್ತಿಗೆಗೆ ಹಗ್ಗೆ ಹಾಕಿ ಅವರನ್ನು ಹೆದರಿಸಿ ಅವರ ಬಳಿ ಇರುವ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.

ಬ್ಯುಸಿನೆಸ್‌ ನೆಪದಲ್ಲಿ ಒಂದಾಗಿದ್ದ ಮೂವರು ದರೋಡೆ ಮಾಡಲು ಹೊರ ರಾಜ್ಯದ ಕಾರನ್ನು ಬಾಡಿಗೆಗೆ ಪಡೆದಿದ್ದರು.

ಕೆಂಗೇರಿ ಬಸ್‌ ನಿಲ್ದಾಣದ ಬಳಿ ಬಸ್‌ ಕಾಯುವವರೇ ಇವರ ಟಾರ್ಗೆಟ್‌ ಆಗಿದ್ದರು. ಡ್ರಾಪ್‌ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಹೋಗುತ್ತಿದ್ದರು. ಮಂಡ್ಯ ಬರುತ್ತಿದ್ದಂತೆ ಅವರ ಕುತ್ತಿಗೆಗೆ ಹಗ್ಗ ಹಾಕಿ ಅವರನ್ನು ಬೆದರಿಸಿ ಅವರ ಬಳಿ ಇದ್ದ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.

ಬಂದ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದರು. ಸದ್ಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago