arrest
ಮಂಡ್ಯ: ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ಮಂಡ್ಯ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದು, ಹಣ ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳು ರಾಬರಿಗೆ ಇಳಿದಿದ್ದರು. ಬಂಧಿತರನ್ನು ಕಿರಣ್, ಕುಶಾಲ್ ಬಾಬು, ಗೋಕುಲ್ ಎಂದು ಗುರುತಿಸಲಾಗಿದೆ.
ಸಾರ್ವಜನಿಕರ ಕುತ್ತಿಗೆಗೆ ಹಗ್ಗೆ ಹಾಕಿ ಅವರನ್ನು ಹೆದರಿಸಿ ಅವರ ಬಳಿ ಇರುವ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.
ಬ್ಯುಸಿನೆಸ್ ನೆಪದಲ್ಲಿ ಒಂದಾಗಿದ್ದ ಮೂವರು ದರೋಡೆ ಮಾಡಲು ಹೊರ ರಾಜ್ಯದ ಕಾರನ್ನು ಬಾಡಿಗೆಗೆ ಪಡೆದಿದ್ದರು.
ಕೆಂಗೇರಿ ಬಸ್ ನಿಲ್ದಾಣದ ಬಳಿ ಬಸ್ ಕಾಯುವವರೇ ಇವರ ಟಾರ್ಗೆಟ್ ಆಗಿದ್ದರು. ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ಹೋಗುತ್ತಿದ್ದರು. ಮಂಡ್ಯ ಬರುತ್ತಿದ್ದಂತೆ ಅವರ ಕುತ್ತಿಗೆಗೆ ಹಗ್ಗ ಹಾಕಿ ಅವರನ್ನು ಬೆದರಿಸಿ ಅವರ ಬಳಿ ಇದ್ದ ಚಿನ್ನ, ಹಣ ಎಗರಿಸಿ ಪರಾರಿಯಾಗುತ್ತಿದ್ದರು.
ಬಂದ ಹಣದಿಂದ ಐಷಾರಾಮಿ ಜೀವನ ನಡೆಸುತ್ತಿದ್ದರು. ಸದ್ಯ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…