ಮಂಡ್ಯ

ಮಂಡ್ಯ-ತೂಬಿನಕೆರೆ ಸರ್ವಿಸ್‌ ರಸ್ತೆ ಅವೈಜ್ಞಾನಿಕ : ವಿವಿಧ ಸಂಘಟನೆಗಳಿಂದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ

ಮಂಡ್ಯ : ತಾಲ್ಲೂಕಿನ ತೂಬಿನಕೆರೆ ಗ್ರಾಮ ಹಾಗೂ ಮಂಡ್ಯದಿಂದ ಪಾಂಡವಪುರ ಸರ್ವಿಸ್ ರಸ್ತೆಗೆ ತಿರುವು ಪಡೆಯುವ ಮತ್ತು ಬೆಂಗಳೂರು-ಮೈಸೂರು ಸರ್ವಿಸ್ ರಸ್ತೆಯ ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿ ಕದಂಬ ಸೈನ್ಯ ಮತ್ತು ಭಾರತೀಯ ಕಿಸಾನ್ ಸಂಘ ಮತ್ತು ಕದಂಸ (ಸ್ವಾಭಿಮಾನ ಕೃಷ್ಣಪ್ಪ ಬಣ) ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-275 ವಿರುದ್ಧ ತೂಬಿನಕೆರೆ ಸಮೀಪ ಪ್ರತಿಭಟಿಸಿದರು.

ತೂಬಿನಕೆರೆ-ಮಂಡ್ಯ- ಪಾಂಡವಪುರ ತಿರುವು ರಸ್ತೆ ಹಾಗೂ ಮೈಸೂರು-ಬೆಂಗಳೂರು ಸರ್ವಿಸ್ ರಸ್ತೆಯಲ್ಲಿ ಯಾವುದೇ ತಡೆಗೋಡೆ ನಿರ್ಮಾಣ ಮಾಡದೇ ಇರುವುದರಿಂದ ಸುಮಾರು 15 ಅಡಿ ಆಳದಲ್ಲಿ ರಸ್ತೆಗೆ ಹೊಂದಿಕೊಂಡಂತೆ ಕೆಲವು ಕುಟುಂಬಗಳವರು (ದನ-ಕರು ಹಸುಗಳು, ಆಡು ಕುರಿಗಳು) ಭಯದಿಂದ ಹಗಲು-ರಾತ್ರಿ ಎನ್ನದೇ ವಾಸಿಸುತ್ತಿದ್ದಾರೆ. ಈಗಾಗಲೇ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಪ್ರತಿನಿತ್ಯ ಸಾವಿರಾರು ಭಾರೀ ವಾಹನಗಳು, ಲಘು ವಾಹನಗಳು, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಒಂದು ವೇಳೆ ಮನೆಯ ಮೇಲೆ ಬಿದ್ದರೆ ಹೆಚ್ಚಿನ ಪ್ರಾಣಾಪಾಯ ಸಂಭವಿಸಬಹುದು. ಇದಕ್ಕೆ ಸಂಪೂರ್ಣವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಹೊಣೆ ಆಗುತ್ತದೆ. ಆದ್ದರಿಂದ ಈ ಮನೆಗಳ ನಿವಾಸಿಗಳಿಗೆ ಬೇರೆ ನಿವೇಶನ ಕಲ್ಪಿಸಿ ಮನೆ ಕಟ್ಟಿಕೊಳ್ಳಲು ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮಂಡ್ಯ-ಮೈಸೂರು ಸರ್ವಿಸ್ ರಸ್ತೆಯಲ್ಲಿ ಪದಾಚಾರಿಗಳಿಗೆ ವ್ಯವಸ್ಥಿತವಾದ ರಸ್ತೆ ಇಲ್ಲದೆ ರಸ್ತೆಯ ಬದಿಯಲ್ಲಿ ಬಿಸಿಲು-ಮಳೆಯಲ್ಲೇ ನಿಂತು ಜನರು, ವಿದ್ಯಾರ್ಥಿಗಳು, ರೋಗಿಗಳು, ಹಿರಿಯ ನಾಗರಿಕರು ವಾಹನಗಳನ್ನು ಹತ್ತಬೇಕಿದೆ. ತೂಬಿನಕೆರೆ ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಶಾಲೆಗಳು, ಖಾಸಗಿ ಶಾಲಾ-ಕಾಲೇಜುಗಳಿದ್ದು, ವ್ಯಾಪಾರ ಕೇಂದ್ರವಾಗಿದೆ. ಎರಡೂ ಕಡೆಗಳಲ್ಲಿ ತಂಗುದಾಣ ನಿರ್ಮಾಣ ಮಾಡಿಲ್ಲ. ಒಳಚರಂಡಿ ನಿರ್ಮಾಣ ಮಾಡದೇ ಇರುವುದರಿಂದ ತ್ಯಾಜ್ಯದ ನೀರು ರಸ್ತೆಗೆ ಹರಡಿಕೊಂಡು ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದೆ.

ತೂಬಿನ ಕೆರೆ ಗ್ರಾಮ ಸೇರಿದಂತೆ ಎಂಟು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-275ದವರು ಅಪಾಯದಲ್ಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಮಾಡಿ ನಿವಾಸಿಗಳಿಗೆ ಬದಲಿ ನಿವೇಶನ ಕಲ್ಪಿಸಬೇಕು. ರಸ್ತೆಯ ಎರಡೂ ಬದಿಗಳಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಬೇಕು. ಒಳ ಚರಂಡಿ ನಿರ್ಮಾಣ ಮಾಡಬೇಕು. ಒಂದು ವೇಳೆ ಪ್ರತಿಭಟನೆಗೆ ಸ್ಪಂದಿಸದಿದ್ದರೆ ಮೈಸೂರಿನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-275 ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಭಾರತೀಯ ಕಿಸಾನ್ ಸಂಘದ ಪ್ರಾಂತ ಅಧ್ಯಕ್ಷ ಹಾಡ್ಯ ರಮೇಶ್ ರಾಜು, ಜಿಲ್ಲಾ ಅಧ್ಯಕ್ಷ ಬಿ.ಪಿ.ಅಪ್ಪಾಜಿ ಹಳೇಬೂದನೂರು, ಕದಸಂಸ ಸ್ವಾಭಿಮಾನ ಕೃಷ್ಣಪ್ಪ ಬಣದ ಜಿಲ್ಲಾ ಸಂಚಾಲಕ ಮೋಹನ್ ಚಿಕ್ಕಮಂಡ್ಯ, ಮುಖಂಡರಾದ ಪ್ರಕಾಶ್, ರಾಮಲಿಂಗಯ್ಯ, ಅಚ್ಯುತ, ಜಯರಾಮ, ಸ್ವಾಮಿ ಎಲೆಚಾಕನಹಳ್ಳಿ ಶ್ರೀಧರ್, ರಾಮಣ್ಣ, ಸಿದ್ದಲಿಂಗು, ರೇವಣ್ಣ, ನಾಗಣ್ಣ, ಚನ್ನೇಗೌಡ, ಕುಮಾರ್, ಜಯಮ್ಮ, ಕದಂಬ ಸೈನ್ಯ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಆರಾಧ್ಯ ಗುಡಿಗೇನಹಳ್ಳಿ, ಕಿಸಾನ್ ಸಂಘದ ಪದಾಧಿಕಾರಿಗಳಾದ ರುದ್ರಪ್ಪ ಬೂದನೂರು, ಬಸವರಾಜು, ಕಲ್ಲೇಶ್ ಹಾಗೂ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago