ಮಂಡ್ಯ

ಮಂಡ್ಯ-ತೂಬಿನಕೆರೆ ಸರ್ವಿಸ್‌ ರಸ್ತೆ ಅವೈಜ್ಞಾನಿಕ : ವಿವಿಧ ಸಂಘಟನೆಗಳಿಂದ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ

ಮಂಡ್ಯ : ತಾಲ್ಲೂಕಿನ ತೂಬಿನಕೆರೆ ಗ್ರಾಮ ಹಾಗೂ ಮಂಡ್ಯದಿಂದ ಪಾಂಡವಪುರ ಸರ್ವಿಸ್ ರಸ್ತೆಗೆ ತಿರುವು ಪಡೆಯುವ ಮತ್ತು ಬೆಂಗಳೂರು-ಮೈಸೂರು ಸರ್ವಿಸ್ ರಸ್ತೆಯ ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿ ಕದಂಬ ಸೈನ್ಯ ಮತ್ತು ಭಾರತೀಯ ಕಿಸಾನ್ ಸಂಘ ಮತ್ತು ಕದಂಸ (ಸ್ವಾಭಿಮಾನ ಕೃಷ್ಣಪ್ಪ ಬಣ) ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-275 ವಿರುದ್ಧ ತೂಬಿನಕೆರೆ ಸಮೀಪ ಪ್ರತಿಭಟಿಸಿದರು.

ತೂಬಿನಕೆರೆ-ಮಂಡ್ಯ- ಪಾಂಡವಪುರ ತಿರುವು ರಸ್ತೆ ಹಾಗೂ ಮೈಸೂರು-ಬೆಂಗಳೂರು ಸರ್ವಿಸ್ ರಸ್ತೆಯಲ್ಲಿ ಯಾವುದೇ ತಡೆಗೋಡೆ ನಿರ್ಮಾಣ ಮಾಡದೇ ಇರುವುದರಿಂದ ಸುಮಾರು 15 ಅಡಿ ಆಳದಲ್ಲಿ ರಸ್ತೆಗೆ ಹೊಂದಿಕೊಂಡಂತೆ ಕೆಲವು ಕುಟುಂಬಗಳವರು (ದನ-ಕರು ಹಸುಗಳು, ಆಡು ಕುರಿಗಳು) ಭಯದಿಂದ ಹಗಲು-ರಾತ್ರಿ ಎನ್ನದೇ ವಾಸಿಸುತ್ತಿದ್ದಾರೆ. ಈಗಾಗಲೇ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಪ್ರತಿನಿತ್ಯ ಸಾವಿರಾರು ಭಾರೀ ವಾಹನಗಳು, ಲಘು ವಾಹನಗಳು, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ. ಒಂದು ವೇಳೆ ಮನೆಯ ಮೇಲೆ ಬಿದ್ದರೆ ಹೆಚ್ಚಿನ ಪ್ರಾಣಾಪಾಯ ಸಂಭವಿಸಬಹುದು. ಇದಕ್ಕೆ ಸಂಪೂರ್ಣವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಹೊಣೆ ಆಗುತ್ತದೆ. ಆದ್ದರಿಂದ ಈ ಮನೆಗಳ ನಿವಾಸಿಗಳಿಗೆ ಬೇರೆ ನಿವೇಶನ ಕಲ್ಪಿಸಿ ಮನೆ ಕಟ್ಟಿಕೊಳ್ಳಲು ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮಂಡ್ಯ-ಮೈಸೂರು ಸರ್ವಿಸ್ ರಸ್ತೆಯಲ್ಲಿ ಪದಾಚಾರಿಗಳಿಗೆ ವ್ಯವಸ್ಥಿತವಾದ ರಸ್ತೆ ಇಲ್ಲದೆ ರಸ್ತೆಯ ಬದಿಯಲ್ಲಿ ಬಿಸಿಲು-ಮಳೆಯಲ್ಲೇ ನಿಂತು ಜನರು, ವಿದ್ಯಾರ್ಥಿಗಳು, ರೋಗಿಗಳು, ಹಿರಿಯ ನಾಗರಿಕರು ವಾಹನಗಳನ್ನು ಹತ್ತಬೇಕಿದೆ. ತೂಬಿನಕೆರೆ ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಶಾಲೆಗಳು, ಖಾಸಗಿ ಶಾಲಾ-ಕಾಲೇಜುಗಳಿದ್ದು, ವ್ಯಾಪಾರ ಕೇಂದ್ರವಾಗಿದೆ. ಎರಡೂ ಕಡೆಗಳಲ್ಲಿ ತಂಗುದಾಣ ನಿರ್ಮಾಣ ಮಾಡಿಲ್ಲ. ಒಳಚರಂಡಿ ನಿರ್ಮಾಣ ಮಾಡದೇ ಇರುವುದರಿಂದ ತ್ಯಾಜ್ಯದ ನೀರು ರಸ್ತೆಗೆ ಹರಡಿಕೊಂಡು ವಾಹನ ಸವಾರರಿಗೆ ಕಿರಿಕಿರಿ ಆಗುತ್ತಿದೆ.

ತೂಬಿನ ಕೆರೆ ಗ್ರಾಮ ಸೇರಿದಂತೆ ಎಂಟು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-275ದವರು ಅಪಾಯದಲ್ಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಮಾಡಿ ನಿವಾಸಿಗಳಿಗೆ ಬದಲಿ ನಿವೇಶನ ಕಲ್ಪಿಸಬೇಕು. ರಸ್ತೆಯ ಎರಡೂ ಬದಿಗಳಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಬೇಕು. ಒಳ ಚರಂಡಿ ನಿರ್ಮಾಣ ಮಾಡಬೇಕು. ಒಂದು ವೇಳೆ ಪ್ರತಿಭಟನೆಗೆ ಸ್ಪಂದಿಸದಿದ್ದರೆ ಮೈಸೂರಿನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ-275 ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಭಾರತೀಯ ಕಿಸಾನ್ ಸಂಘದ ಪ್ರಾಂತ ಅಧ್ಯಕ್ಷ ಹಾಡ್ಯ ರಮೇಶ್ ರಾಜು, ಜಿಲ್ಲಾ ಅಧ್ಯಕ್ಷ ಬಿ.ಪಿ.ಅಪ್ಪಾಜಿ ಹಳೇಬೂದನೂರು, ಕದಸಂಸ ಸ್ವಾಭಿಮಾನ ಕೃಷ್ಣಪ್ಪ ಬಣದ ಜಿಲ್ಲಾ ಸಂಚಾಲಕ ಮೋಹನ್ ಚಿಕ್ಕಮಂಡ್ಯ, ಮುಖಂಡರಾದ ಪ್ರಕಾಶ್, ರಾಮಲಿಂಗಯ್ಯ, ಅಚ್ಯುತ, ಜಯರಾಮ, ಸ್ವಾಮಿ ಎಲೆಚಾಕನಹಳ್ಳಿ ಶ್ರೀಧರ್, ರಾಮಣ್ಣ, ಸಿದ್ದಲಿಂಗು, ರೇವಣ್ಣ, ನಾಗಣ್ಣ, ಚನ್ನೇಗೌಡ, ಕುಮಾರ್, ಜಯಮ್ಮ, ಕದಂಬ ಸೈನ್ಯ ರಾಜ್ಯ ಸಹ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಆರಾಧ್ಯ ಗುಡಿಗೇನಹಳ್ಳಿ, ಕಿಸಾನ್ ಸಂಘದ ಪದಾಧಿಕಾರಿಗಳಾದ ರುದ್ರಪ್ಪ ಬೂದನೂರು, ಬಸವರಾಜು, ಕಲ್ಲೇಶ್ ಹಾಗೂ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago