ಮಂಡ್ಯ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ ನಾಳೆ, ನಾಡಿದ್ದು 2 ದಿನಗಳ ಬೃಹತ್ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಭಾಗಿಯಾಗಲಿವೆ.

ಈ ಬಗ್ಗೆ ಸ್ವತಃ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದು; ದೇಶದ ಉದ್ದಗಲಕ್ಕೂ ಇರುವ 150ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳಕ್ಕೆ ಬರಲಿದ್ದು, ಈ ಭಾಗದ ಮೂರು ಸಾವಿರಕ್ಕೂ ಹೆಚ್ಚು ನಿರುದ್ಯೋಗಿ ಯುವ ಜನರಿಗೆ ಉದ್ಯೋಗ ಕೊಡಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

ಮಂಡ್ಯ ಟೂ ಇಂಡಿಯಾ ಎನ್ನುವ ಘೋಷವಾಕ್ಯದೊಂದಿಗೆ ಉದ್ಯೋಗ ಮೇಳ ನಡೆಯುತ್ತಿದ್ದು, ಮಂಡ್ಯದ ಇತಿಹಾಸದಲ್ಲಿಯೇ ಇದೊಂದು ಮೈಲುಗಲ್ಲು ಆಗಲಿದೆ. ರೈತಾಪಿ ಜನರ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವುದು ನನ್ನ ಮಹದಾಸೆ ಆಗಿದ್ದು, ಈ ಮೂಲಕ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನಾಳೆ ಹಾಗೂ ನಾಡಿದ್ದು (ಅಕ್ಟೋಬರ್ 18-19) ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಆಸಕ್ತ ಯುವಜನರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದ್ದಾರೆ.

ಪ್ರತಿದಿನವೂ ನನ್ನ ಮನೆಗೆ ಬರುವ ಅಸಂಖ್ಯಾತ ನಿರುದ್ಯೋಗಿ ಯುವ ಜನರು ಉದ್ಯೋಗ ಕೊಡಿಸಿ ಎಂದು ಕೇಳುತ್ತಾರೆ. ಅವರ ತಂದೆತಾಯಿ ಮಕ್ಕಳ ಭವಿಷ್ಯಕ್ಕಾಗಿ ಕನಸು ಕಟ್ಟಿಕೊಂಡಿದ್ದಾರೆ. ನಿತ್ಯವೂ ನೂರಾರು ಜನರು ನನ್ನ ಮನೆಯ ಬಳಿಗೆ ಬಂದಾಗ ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಆದರೆ, ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಉದ್ಯೋಗ ಮೇಳದ ಮೂಲಕ ಸಾವಿರಾರು ಸಂಖ್ಯೆಯಷ್ಟು ಯುವ ಜನರಿಗೆ ಕೆಲಸ ಸಿಗಲಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಪ್ರತಿಭಾನ್ವಿತ ಯುವ ಜನರಿಗೆ ಕೊರತೆ ಇಲ್ಲ. ಉತ್ತಮ ವಿದ್ಯಾ ಸಂಸ್ಥೆಗಳು ಇದ್ದು, ಪ್ರತಿವರ್ಷ ಸಾಕಷ್ಟು ಯುವಜನರು ಉತ್ತೀರ್ಣರಾಗಿ ಕಾಲೇಜುಗಳಿಂದ ಹೊರಗೆ ಬರುತ್ತಿದ್ದಾರೆ. ಇವರಿಗೆ ಆದಷ್ಟು ಉದ್ಯೋಗಾವಕಾಶ ಕಲ್ಪಿಸಬೇಕು ಎನ್ನುವುದು ನನ್ನ ಸಂಕಲ್ಪವಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮೇಕಾನ್, ಭಾರತೀಯ ಉಕ್ಕು ಪ್ರಾಧಿಕಾರ (SAIL), ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (NMDC), ಲೈಲೋಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ (BHEL), ಜಿಂದಾಲ್ ಸ್ಟೀಲ್ ಸೇರಿದಂತೆ 150ಕ್ಕೂ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ನೇರ ನೇಮಕಾತಿ ಮಾಡಿಕೊಳ್ಳುತ್ತಿವೆ. ದೇಶಾದ್ಯಂತ ಉದ್ಯೋಗ ಅವಕಾಶಗಳು ಲಭ್ಯ ಇದ್ದು, ಈ ಅವಕಾಶವನ್ನು ಯುವ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವರು ಕೋರಿದ್ದಾರೆ.

ನನ್ನ ಸಚಿವಾಲಯದ ಉನ್ನತ ಅಧಿಕಾರಿಗಳು, ಮಂಡ್ಯ ಜಿಲ್ಲೆಯ ಉನ್ನತ ಹಾಗೂ ಎಲ್ಲಾ ಶ್ರೇಣಿಯ ಅಧಿಕಾರಿಗಳು ಉದ್ಯೋಗ ಮೇಳ ಯಶಸ್ಸಿಗೆ ಕೆಲಸ ಮಾಡುತ್ತಿದ್ದು, ಉದ್ಯೋಗ ಅರಸಿ ಬರುವ ಅಭ್ಯರ್ಥಿಗಳಿಗೆ ನಮ್ಮ ಸ್ವಯಂ ಸೇವಕರು, ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಕಂಪನಿಗಳ ಅಧಿಕಾರಿಗಳು ಅಭ್ಯರ್ಥಿಗಳ ವಿವರಗಳನ್ನು ಗಮನಿಸಿದ ನಂತರ ಅವರಿಗೆ ಸೂಕ್ತವಾದ, ಅರ್ಹವಾದ ಹುದ್ದೆಯನ್ನು ನೀಡುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

2 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

5 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

7 hours ago