ಮಂಡ್ಯ: ಜಿಲ್ಲೆಯಾದ್ಯಂತ 45 ಹೋಬಳಿಗಳಲ್ಲಿ ನಾಡಕಚೇರಿಗೆ ಬರುವ ಅರ್ಜಿಗಳನ್ನು ತೀವ್ರವಾಗಿ ವಿಲೇವಾರಿ ಮಾಡಿ ಉತ್ತಮ ಸೇವೆ ಸಲ್ಲಿಸಿದ ನುರಿತ ಅಧಿಕಾರಿಗಳನ್ನು ಬುಧವಾರ ಜಿಲ್ಲಾಧಿಕಾರಿ ಡಾ. ಕುಮಾರ ಸನ್ಮಾನಿಸಿ ಅಭಿನಂದಿಸಿದರು.
ಮಳವಳ್ಳಿ ತಾಲ್ಲೂಕಿನ ಬಂಡೂರು ನಾಡಕಛೇರಿಯ ಉಪ ತಹಶೀಲ್ದಾರ್ ತ್ಯಾಗರಾಜ, ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ನಾಡಕಛೇರಿಯ ಉಪ ತಹಶೀಲ್ದಾರ್ ವರುಣ್, ನಾಗಮಂಗಲ ತಾಲ್ಲೂಕಿನ ಹೊಣಕೆರೆ ನಾಡಕಛೇರಿಯ ಉಪ ತಹಶೀಲ್ದಾರ್ ಪ್ರಸನ್ನ ಅವರನ್ನು ಸನ್ಮಾನಿಸಿದರು.
ಅಕ್ಟೋಬರ್ ಹಾಗೂ ನವೆಂಬರ್ ಮಾಹೆಯಲ್ಲಿ ತಮ್ಮ ಕಚೇರಿಗೆ ಬಂದ ಅರ್ಜಿಗಳನ್ನು ತೀವ್ರವಾಗಿ ವಿಲೇವಾರಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿಯಲ್ಲಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಹೆಚ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…