ಮಂಡ್ಯ: ಸರ್ಕಾರ ಒಂದು ಗುಂಪನ್ನು ಓಲೈಸುತ್ತಿರುವುದರಿಂದ ಈ ರೀತಿಯ ಉದ್ಧಟತನ ಪ್ರಾರಂಭವಾಗಿದೆ ಎಂದು ಮಂಡ್ಯದಲ್ಲಿ ಗಣೇಶ ವಿಸರ್ಜನೆ ಗಲಾಟೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಗಲಾಟೆ ಸಂಬಂಧ ಎಸ್ಪಿ ಜೊತೆ ಮಾತನಾಡಿದ್ದೇನೆ. ನಿನ್ನೆ ಸಾಯಂಕಾಲ ನಡೆದ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಆಗಿದೆ. ಇದು ಉಉಲ್ಬಣ ಆಗದಂತೆ ನೋಡಿಕೊಳ್ಳಿ. ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ನಾನು ದೆಹಲಿಯಿಂದ ಬಂದ ತಕ್ಷಣ ಸ್ಥಳ ಪರಿಶೀಲನೆ ಮಾಡುತ್ತೇನೆ. ಇದನ್ನು ಇಲ್ಲಿಗೆ ನಿಲ್ಲಿಸುವುದು ಒಳ್ಳೆಯದು. ಬೇರೆ ರೀತಿಯಲ್ಲಿ ತೆಗೆದುಕೊಂಡು ಹೋಗಿ ಜನರಲ್ಲಿ ಅಶಾಂತಿ ಉಂಟು ಮಾಡಬಾರದು. ಅಮಾಯಕರ ಸಾವು-ನೋವಾಗಬಾರದು ಎಂದು ಎರಡೂ ಗುಂಪುಗಳಲ್ಲಿ ನಾನು ಮನವಿ ಮಾಡುತ್ತೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸರ್ಕಾರ ಒಂದು ಗುಂಪನ್ನು ಓಲೈಸಿಕೊಂಡು ಹೋಗುವ ಕೆಲಸ ಮಾಡುತ್ತಿದೆ. ಆದ್ದರಿಂದಲೇ ಪದೇ ಪದೇ ಈ ಘಟನೆ ನಡೆಯುತ್ತಿದೆ. ಇಂತಹ ಘಟನೆಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಪ್ರಕರಣಗಳಿಂದ ಅಮಾಯಕರು ತೊಂದರೆಗೆ ಒಳಗಾಗುತ್ತಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…
ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…
ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…
ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು…