Mysore
14
few clouds

Social Media

ಗುರುವಾರ, 22 ಜನವರಿ 2026
Light
Dark

ಮಂಡ್ಯ| ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ

ಮಳವಳ್ಳಿ: ಸಾಲಬಾಧೆ ತಾಳಲಾರದೇ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕೆಂಪನದೊಡ್ಡಿಯಲ್ಲಿ ನಡೆದಿದೆ.

ರೈತ ರಾಮಲಿಂಗಯ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಯತ್ನಿಸಿದ್ದ ರೈತ ರಾಮಲಿಂಗಯ್ಯ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕಳೆದ ತಡರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇದನ್ನು ಓದಿ: ರೈತರ ಆತ್ಮಹತ್ಯೆ : ಪರಿಹಾರ ವಿಳಂಬಕ್ಕೆ ಸಿಎಂ ಗರಂ

ಕಾಳಿಕಂಪನ ದೊಡ್ಡಿಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದ ರೈತ ರಾಮಲಿಂಗಯ್ಯ ಅವರು, ಬಾಳೆಯಲ್ಲಿ ಸರಿಯಾದ ಬೆಲೆ ಸಿಗದೆ ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಸಾಲಗಾರರ ಕಾಟ ತಡೆಯಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ರೈತ ರಾಮಲಿಂಗಯ್ಯ ಅವರು, ಪತ್ನಿ ಸೌಮ್ಯ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!