ಮಳವಳ್ಳಿ: ಸಾಲಬಾಧೆ ತಾಳಲಾರದೇ ಅನ್ನದಾತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕೆಂಪನದೊಡ್ಡಿಯಲ್ಲಿ ನಡೆದಿದೆ.
ರೈತ ರಾಮಲಿಂಗಯ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಆತ್ಮಹತ್ಯೆ ಯತ್ನಿಸಿದ್ದ ರೈತ ರಾಮಲಿಂಗಯ್ಯ ಅವರನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಕಳೆದ ತಡರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇದನ್ನು ಓದಿ: ರೈತರ ಆತ್ಮಹತ್ಯೆ : ಪರಿಹಾರ ವಿಳಂಬಕ್ಕೆ ಸಿಎಂ ಗರಂ
ಕಾಳಿಕಂಪನ ದೊಡ್ಡಿಯಲ್ಲಿ ಮೂರು ಎಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದ ರೈತ ರಾಮಲಿಂಗಯ್ಯ ಅವರು, ಬಾಳೆಯಲ್ಲಿ ಸರಿಯಾದ ಬೆಲೆ ಸಿಗದೆ ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಸಾಲಗಾರರ ಕಾಟ ತಡೆಯಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ರೈತ ರಾಮಲಿಂಗಯ್ಯ ಅವರು, ಪತ್ನಿ ಸೌಮ್ಯ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…