ಮಂಡ್ಯ

ಮಂಡ್ಯ: ಜಿಲ್ಲೆಯ ರೈತರು ಶಿಫಾರಸ್ಸು ಮಾಡಿದ ತಳಿಗಳನ್ನು ಬಳಸಿ

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯದಿಂದ ಕೃಷಿ ಬೆಳೆಗಳಿಗೆ ನೀರು ಬಿಡಲಾಗುತ್ತಿದ್ದು. ರೈತರಿಗೆ ಅವಶ್ಯಕತೆ ಇರುವ ಚಿತ್ತನೆ ಬೀಜಗಳನ್ನು (ಭತ್ತ, ರಾಗಿ. ದ್ವಿದಳಧಾನ್ಯ ಹಾಗೂ ಇತರೆ) ರೈತ ಸಂಪರ್ಕ ಕೇಂದ್ರ, ಸಹಕಾರ ಸಂಘ ಹಾಗೂ ಎಫ್.ಪಿ.ಓ. ಗಳ ಮುಖಾಂತರ ಸಹಾಯಧನದಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ ಮತ್ತು ಖಾಸಗಿ ಬಿತ್ತನೆ ಬೀಜ ಮಾರಾಟಗಾರರಿಂದ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತಿದ್ದು, ರೈತರು ಜಿಲ್ಲೆಗೆ ಶಿಫಾರಸ್ಸು ಮಾಡಲಾದ ತಳಿಗಳನ್ನು ಮಾತ್ರ ಬಳಕೆ ಮಾಡಬೇಕಾಗಿ ಮಂಡ್ಯ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಭತ್ತದ ಉತ್ಪಾದನೆ ಹೆಚ್ಚಿಸಲು ಸುಧಾರಿತ ಬೇಸಾಯ ಕ್ರಮ
ಕೃಷಿ ಇಲಾಖೆ ವತಿಯಿಂದ “ಭತ್ತದ ಉತ್ಪಾದನೆ ಹೆಚ್ಚಿಸಲು ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರ ಮಾರಾಟಗಾರರಿಗೆ ತರಬೇತಿಯನ್ನು ನೀಡಲಾಗಿದ್ದು, ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು, ಕೃಷಿ ವಿದ್ಯಾಲಯದ ವಿಜ್ಞಾನಿಗಳು ಹಾಗೂ ಕೃಷಿ ಪರಿಕರ ಮಾರಾಟಗಾರರಿಂದ ಭತ್ತದ ಬೆಳೆಯಲ್ಲಿ ಉತ್ಪಾದಕತೆ ಹೆಚ್ಚಿಸಲು ತಾಂತ್ರಿಕ ಮಾಹಿತಿಯನ್ನು ಪಡೆಯಬೇಕು.

ಸುಧಾರಿತ ಬೇಸಾಯ ಪದ್ಧತಿಗಳು

ಯಾಂತ್ರೀಕೃತ ಭತ್ತದ ಸಾಲು ಬೇಸಾಯ ಪದ್ದತಿ, ಶ್ರೀ ಪದ್ದತಿಯಲ್ಲಿ ಭತ್ತದ ಬೇಸಾಯ, ಡ್ರಮ್ ಸೀಡರ್‌ನಿಂದ ಭತ್ತದ ನೇರ ಬಿತ್ತನೆ ಹಾಗೂ ಕೂರಿಗೆಯಿಂದ ನೇರ ಬಿತ್ತನೆ ಪದ್ಧತಿಯನ್ನು ಅಳವಡಿಸಿಕೊಳ್ಳಬಹುದು.

ಸಮಗ್ರ ಪೋಷಕಾಂಶಗಳ ನಿರ್ವಹಣೆ

ಮುಖ್ಯ ಭೂಮಿ ಸಿದ್ದತೆ ಸಂದರ್ಭದಲ್ಲಿ ಪ್ರತಿ ಎಕರೆಗೆ 4 ಟನ್ ಕಾಂಪೋಸ್ಟ್ / ಕೊಟ್ಟಿಗೆ ಗೊಬ್ಬರ ಮತ್ತು 8 ಕೆ.ಜಿ ಸತುವಿನ ಸಲ್ವೇಟ್, ಲಘು ಪೋಷಕಾಂಶವನ್ನು ಮಣ್ಣಿಗೆ ಸೇರಿಸುವುದು ಹಾಗೂ ಭತ್ತದ ಬೆಳೆಗೆ ಶಿಫಾರಸ್ಸು ಮಾಡಲಾದ ಪ್ರಮಾಣದಲ್ಲಿ ವಿವಿಧ ಹಂತಗಳಲ್ಲಿ ರಸಗೊಬ್ಬರವನ್ನು ಎಕರೆಗೆ ಸಾರಜನಕ (40) : ರಂಜಕ (20) : ಬೊಟ್ಯಾಷ್ (20) ಮಾತ್ರ ಬಳಕೆ ಮಾಡಬೇಕು.

ಜೈವಿಕ ಗೊಬ್ಬರ ಬಳಕೆ
800 ಗ್ರಾಂ ಅಜೋಸ್ಪೆರಿಲ್ಲಂ ಅನ್ನು 25 ಕೆ.ಜಿ ಚೆನ್ನಾಗಿ ಕಳಿತ ಕಾಂಪೋಸ್ಟ್ ಗೊಬ್ಬರದ ಜೊತೆ ಬೆರೆಸಿಮುಖ್ಯ ಭೂಮಿಗೆ ನಾಟಿಗೆ ಮುಂಚೆ ಎರಚಿ ಉಳುಮೆ ಮಾಡುವುದು. 800 ಗ್ರಾಂ (ಪಿ.ಎಸ್.ಬಿ) ರಂಜಕ ಕರಗಿಸುವ ಜೀವಾಣು ಗೊಬ್ಬರವನ್ನು 4 ಕೆ.ಜಿ ಕೊಟ್ಟಿಗೆ ಗೊಬ್ಬರ ಹಾಗೂ 4 ಕೆ.ಜಿ ಮಣ್ಣಿನೊಡನೆ ಬೆರೆಸಿ ಪ್ರತಿ ಎಕರೆಗೆ ಭತ್ತ ನಾಟಿ ಮಾಡಿದ 6-8 ನೇ ದಿನಗಳಲ್ಲಿ ಎರಚುವುದರಿಂದ ಬೆಳೆಗಳಿಗೆ ನೇರವಾಗಿ ಸಾರಜನಕ, ರಂಜಕ, ಪೊಟ್ಯಾಷ್ ಹಾಗೂ ಇತರೆ ಲಘು ಪೋಷಕಾಂಶಗಳು ಲಭ್ಯವಾಗುವುದು ಹಾಗೂ ಸಾರಜನಕವನ್ನು ಭೂಮಿಯಲ್ಲಿ ಹೆಚ್ಚು ಹಿಡಿದಿಟ್ಟುಕೊಂಡು ನಿಧಾನವಾಗಿ ಸಸ್ಯಗಳಲ್ಲಿ ಬಿಡುಗಡೆಯಾಗುವಂತೆ ಮಾಡಲು ನ್ಯಾನೋ ಯೂರಿಯಾ ಬಳಕೆ ಮಾಡಬೇಕು.

ಸುಧಾರಿತ ಬೇಸಾಯ ಕ್ರಮಗಳಾದ ಹೊಸ ತಾಂತ್ರಿಕತೆಗಳ ಉಪಯೋಗ, ಸೂಕ್ತ ತಳಿಗಳ ಆಯ್ಕೆ, ನೀರು ನಿರ್ವಹಣೆ, ಜೈವಿಕ ಗೊಬ್ಬರ ಬಳಕೆ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ಸಮಗ್ರ ಕೀಟ ಹಾಗೂ ರೋಗ ನಿರ್ವಹಣೆ ಮಾಡುವುದರ ಮೂಲಕ ಭತ್ತದಲ್ಲಿ ಉತ್ಪಾದನೆ ಹೆಚ್ಚಿಸಲು ಸೂಕ್ತ ಕ್ರಮ ವಹಿಸಿ ಎಂದು ಮಂಡ್ಯ ಉಪವಿಭಾಗ, ಉಪ ಕೃಷಿ ನಿರ್ದೇಶಕಿ ಮಾಲತಿ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…

17 seconds ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

3 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

3 hours ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

3 hours ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

3 hours ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

3 hours ago