ಮಂಡ್ಯ

ಮಂಡ್ಯ: ಜಿಲ್ಲೆಯ ರೈತರು ಶಿಫಾರಸ್ಸು ಮಾಡಿದ ತಳಿಗಳನ್ನು ಬಳಸಿ

ಮಂಡ್ಯ: ಮುಂಗಾರು ಹಂಗಾಮಿನಲ್ಲಿ ಜಿಲ್ಲಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ ಜಲಾಶಯದಿಂದ ಕೃಷಿ ಬೆಳೆಗಳಿಗೆ ನೀರು ಬಿಡಲಾಗುತ್ತಿದ್ದು. ರೈತರಿಗೆ ಅವಶ್ಯಕತೆ ಇರುವ ಚಿತ್ತನೆ ಬೀಜಗಳನ್ನು (ಭತ್ತ, ರಾಗಿ. ದ್ವಿದಳಧಾನ್ಯ ಹಾಗೂ ಇತರೆ) ರೈತ ಸಂಪರ್ಕ ಕೇಂದ್ರ, ಸಹಕಾರ ಸಂಘ ಹಾಗೂ ಎಫ್.ಪಿ.ಓ. ಗಳ ಮುಖಾಂತರ ಸಹಾಯಧನದಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ ಮತ್ತು ಖಾಸಗಿ ಬಿತ್ತನೆ ಬೀಜ ಮಾರಾಟಗಾರರಿಂದ ಬಿತ್ತನೆ ಬೀಜಗಳನ್ನು ಮಾರಾಟ ಮಾಡಲಾಗುತ್ತಿದ್ದು, ರೈತರು ಜಿಲ್ಲೆಗೆ ಶಿಫಾರಸ್ಸು ಮಾಡಲಾದ ತಳಿಗಳನ್ನು ಮಾತ್ರ ಬಳಕೆ ಮಾಡಬೇಕಾಗಿ ಮಂಡ್ಯ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಭತ್ತದ ಉತ್ಪಾದನೆ ಹೆಚ್ಚಿಸಲು ಸುಧಾರಿತ ಬೇಸಾಯ ಕ್ರಮ
ಕೃಷಿ ಇಲಾಖೆ ವತಿಯಿಂದ “ಭತ್ತದ ಉತ್ಪಾದನೆ ಹೆಚ್ಚಿಸಲು ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರ ಮಾರಾಟಗಾರರಿಗೆ ತರಬೇತಿಯನ್ನು ನೀಡಲಾಗಿದ್ದು, ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು, ಕೃಷಿ ವಿದ್ಯಾಲಯದ ವಿಜ್ಞಾನಿಗಳು ಹಾಗೂ ಕೃಷಿ ಪರಿಕರ ಮಾರಾಟಗಾರರಿಂದ ಭತ್ತದ ಬೆಳೆಯಲ್ಲಿ ಉತ್ಪಾದಕತೆ ಹೆಚ್ಚಿಸಲು ತಾಂತ್ರಿಕ ಮಾಹಿತಿಯನ್ನು ಪಡೆಯಬೇಕು.

ಸುಧಾರಿತ ಬೇಸಾಯ ಪದ್ಧತಿಗಳು

ಯಾಂತ್ರೀಕೃತ ಭತ್ತದ ಸಾಲು ಬೇಸಾಯ ಪದ್ದತಿ, ಶ್ರೀ ಪದ್ದತಿಯಲ್ಲಿ ಭತ್ತದ ಬೇಸಾಯ, ಡ್ರಮ್ ಸೀಡರ್‌ನಿಂದ ಭತ್ತದ ನೇರ ಬಿತ್ತನೆ ಹಾಗೂ ಕೂರಿಗೆಯಿಂದ ನೇರ ಬಿತ್ತನೆ ಪದ್ಧತಿಯನ್ನು ಅಳವಡಿಸಿಕೊಳ್ಳಬಹುದು.

ಸಮಗ್ರ ಪೋಷಕಾಂಶಗಳ ನಿರ್ವಹಣೆ

ಮುಖ್ಯ ಭೂಮಿ ಸಿದ್ದತೆ ಸಂದರ್ಭದಲ್ಲಿ ಪ್ರತಿ ಎಕರೆಗೆ 4 ಟನ್ ಕಾಂಪೋಸ್ಟ್ / ಕೊಟ್ಟಿಗೆ ಗೊಬ್ಬರ ಮತ್ತು 8 ಕೆ.ಜಿ ಸತುವಿನ ಸಲ್ವೇಟ್, ಲಘು ಪೋಷಕಾಂಶವನ್ನು ಮಣ್ಣಿಗೆ ಸೇರಿಸುವುದು ಹಾಗೂ ಭತ್ತದ ಬೆಳೆಗೆ ಶಿಫಾರಸ್ಸು ಮಾಡಲಾದ ಪ್ರಮಾಣದಲ್ಲಿ ವಿವಿಧ ಹಂತಗಳಲ್ಲಿ ರಸಗೊಬ್ಬರವನ್ನು ಎಕರೆಗೆ ಸಾರಜನಕ (40) : ರಂಜಕ (20) : ಬೊಟ್ಯಾಷ್ (20) ಮಾತ್ರ ಬಳಕೆ ಮಾಡಬೇಕು.

ಜೈವಿಕ ಗೊಬ್ಬರ ಬಳಕೆ
800 ಗ್ರಾಂ ಅಜೋಸ್ಪೆರಿಲ್ಲಂ ಅನ್ನು 25 ಕೆ.ಜಿ ಚೆನ್ನಾಗಿ ಕಳಿತ ಕಾಂಪೋಸ್ಟ್ ಗೊಬ್ಬರದ ಜೊತೆ ಬೆರೆಸಿಮುಖ್ಯ ಭೂಮಿಗೆ ನಾಟಿಗೆ ಮುಂಚೆ ಎರಚಿ ಉಳುಮೆ ಮಾಡುವುದು. 800 ಗ್ರಾಂ (ಪಿ.ಎಸ್.ಬಿ) ರಂಜಕ ಕರಗಿಸುವ ಜೀವಾಣು ಗೊಬ್ಬರವನ್ನು 4 ಕೆ.ಜಿ ಕೊಟ್ಟಿಗೆ ಗೊಬ್ಬರ ಹಾಗೂ 4 ಕೆ.ಜಿ ಮಣ್ಣಿನೊಡನೆ ಬೆರೆಸಿ ಪ್ರತಿ ಎಕರೆಗೆ ಭತ್ತ ನಾಟಿ ಮಾಡಿದ 6-8 ನೇ ದಿನಗಳಲ್ಲಿ ಎರಚುವುದರಿಂದ ಬೆಳೆಗಳಿಗೆ ನೇರವಾಗಿ ಸಾರಜನಕ, ರಂಜಕ, ಪೊಟ್ಯಾಷ್ ಹಾಗೂ ಇತರೆ ಲಘು ಪೋಷಕಾಂಶಗಳು ಲಭ್ಯವಾಗುವುದು ಹಾಗೂ ಸಾರಜನಕವನ್ನು ಭೂಮಿಯಲ್ಲಿ ಹೆಚ್ಚು ಹಿಡಿದಿಟ್ಟುಕೊಂಡು ನಿಧಾನವಾಗಿ ಸಸ್ಯಗಳಲ್ಲಿ ಬಿಡುಗಡೆಯಾಗುವಂತೆ ಮಾಡಲು ನ್ಯಾನೋ ಯೂರಿಯಾ ಬಳಕೆ ಮಾಡಬೇಕು.

ಸುಧಾರಿತ ಬೇಸಾಯ ಕ್ರಮಗಳಾದ ಹೊಸ ತಾಂತ್ರಿಕತೆಗಳ ಉಪಯೋಗ, ಸೂಕ್ತ ತಳಿಗಳ ಆಯ್ಕೆ, ನೀರು ನಿರ್ವಹಣೆ, ಜೈವಿಕ ಗೊಬ್ಬರ ಬಳಕೆ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ಸಮಗ್ರ ಕೀಟ ಹಾಗೂ ರೋಗ ನಿರ್ವಹಣೆ ಮಾಡುವುದರ ಮೂಲಕ ಭತ್ತದಲ್ಲಿ ಉತ್ಪಾದನೆ ಹೆಚ್ಚಿಸಲು ಸೂಕ್ತ ಕ್ರಮ ವಹಿಸಿ ಎಂದು ಮಂಡ್ಯ ಉಪವಿಭಾಗ, ಉಪ ಕೃಷಿ ನಿರ್ದೇಶಕಿ ಮಾಲತಿ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

2 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

2 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago