mandya District Incharge Minister
ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು.
ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನ-13, ಬ್ಯಾಟರಿ ಚಾಲಿತ ವೀಲ್ ಚೇರ್- 11, ಶ್ರವಣ ಸಾಧನ- 15, ವೀಲ್ ಚೇರ್- 04, ಟ್ರೈಸೈಕಲ್-02, ಕ್ರಚಸ್೯-04 ಹಾಗೂ ವಾಕರ್- 02 ಒಟ್ಟು 50 ವಿಶೇಷಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿ ಸಾಧನ ಸಲಕರಣೆಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗೆ ಎಂ.ಎಂ.ಯು ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಮೂರು ಮೊಬೈಲ್ ಮೆಡಿಕಲ್ ಯುನಿಟ್ ವಾಹನಗಳು ಜಿಲ್ಲೆಗೆ ಮಂಜೂರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು.
ಸರ್ಕಾರ ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಜ್ಞಾನಾರ್ಜನೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 255 ಗ್ರಾಮಗಳಲ್ಲಿ ಗ್ರಂಥಾಲಯವನ್ನು ಪ್ರಾರಂಭಿಸಿದ್ದು, ಇಂದು ಸಚಿವರು ಹೆಚ್ಚುವರಿ 255 ಗ್ರಂಥಾಲಯಗಳಿಗೆ ಪ್ರತಿ ಗ್ರಂಥಾಲಯಕ್ಕೆ 2 ಲಕ್ಷ ರೂ ವೆಚ್ಚದ ಪುಸ್ತಕಗಳನ್ನು ಸಾಂಕೇತಿವಾಗಿ ವಿತರಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ಎನ್.ಚಲುವರಾಯಸ್ವಾಮಿ ಅವರು, ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಯೋಜನೆಗಳ ಬಗ್ಗೆ ಸದರಿ ಸಾಲಿನಲ್ಲಿ ವಿಶೇಷ ನಿಗಾ ವಹಿಸಲಾಗುವುದು. ಪ್ರತಿವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ವರದಿ ಪಡೆಯಲಾಗುವುದು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿಗದಿಪಡಿಸಿರುವ ಗುರಿಯನ್ನು ಶೇ100ರಷ್ಟು ಸಾಧನೆ ಮಾಡಲು ಕಾರ್ಯಪ್ರವೃತ್ತರಾಗಬೇಕು ಎಂದರು.
ಮಳೆಗಾಲ ಪ್ರಾರಂಭವಾಗಿದ್ದು, ಯಾವುದೇ ಮಳೆ ಹಾನಿ ಅವಘಡವಾಗದಂತೆ ಮುನ್ನೆಚ್ಚರಿಕೆ ವಹಿಸಿ. ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡಿ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸಿ ಎಂದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…