ವಿವಿಧ ಜಯಂತಿಯಗಳನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ : ಬಿ. ಸಿ ಶಿವಾನಂದಮೂರ್ತಿ
ಮಂಡ್ಯ : ಜಿಲ್ಲಾಡಳಿತ ವತಿಯಿಂದ ಏಪ್ರಿಲ್ ಮಾಹೆಯಲ್ಲಿ ಬರುವ ಜಯಂತಿಗಳನ್ನು ಯಾವುದೇ ಲೋಪದೋಷವಿಲ್ಲದೆ ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವಾನಂದಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಏಪ್ರಿಲ್ ಮಾಹೆಯಲ್ಲಿ ಬರುವ ದೇವರದಾಸಿಮಯ್ಯ ಜಯಂತಿ ಹಾಗೂ ಭಗವಾನ್ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ನಡೆಸಲು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ದೇವರದಾಸಿಮಯ್ಯ ಜಯಂತಿಯನ್ನು ಏಪ್ರಿಲ್ 2 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಚರಿಸಲು ಸಮುದಾಯ ಮುಖಂಡರೊಂದಿಗೆ ಚರ್ಚಿಸಿ ತೀರ್ಮಾನಿಸಿದರು.
ಭಗವಾನ್ ಮಹಾವೀರ ಜಯಂತಿಯನ್ನು ಏಪ್ರಿಲ್ 10 ರಂದು ಕಲಾಮಂದಿರದಲ್ಲಿ ಆಚರಿಸಲು ಸಮುದಾಯ ಮುಖಂಡರೊಂದಿಗೆ ಚರ್ಚಿಸಿ ನಿರ್ಧರಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಂದೀಶ್, ಆಯುಷ್ ವೈದ್ಯಾಧಿಕಾರಿ ಪುಷ್ಪ, ಜಿಲ್ಲಾ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಸೋಮಶೇಖರ್ ಹಾಗೂ ವಿವಿಧ ಸಮುದಾಯ ಮುಖಂಡರು ಉಪಸ್ಥಿತರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…