Mandya | Villagers protest against patchwork on the bridge.
ಮಂಡ್ಯ : ಮಂಡ್ಯ-ನಾಗಮಂಗಲ ರಾಜ್ಯ ಹೆದ್ದಾರಿಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಸಮೀಪದ ಹಳೇ ಸೇತುವೆಯನ್ನು ಸಮರ್ಪಕವಾಗಿ ದುಸ್ಥಿಪಡಿಸದೆ, ತೇಪೆ ಹಾಕಿ ಕಳಪೆ ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಮಂಡ್ಯ-ನಾಗಮಂಗಲ ರಸ್ತೆಯಲ್ಲಿರುವ ಎಚ್.ಕೋಡಿಹಳ್ಳಿ ಫಾರಂನ ತಿರುವಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗಿದೆ. ಹಿಂದೆ ಪೈಪ್ಗಳನ್ನು ಅಳವಡಿಸಿ ಸೇತುವೆ ನಿರ್ಮಿಸಿದ್ದು, ಇದರಿಂದ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಸುತ್ತಮುತ್ತಲ ಗ್ರಾಮಸ್ಥರು, ರೈತರು ಪರದಾಡುವಂತಾಗಿದೆ ಎಂದು ದೂರಿದರು.
ಮಳೆಗಾಲದಲ್ಲಿ ಪೈಪ್ಗೆ ಅಡ್ಡಲಾಗಿ ಕಸ-ಕಡ್ಡಿಗಳು, ಮರದ ಕೊಂಬೆಗಳು ಹಾಗೂ ಇನ್ನಿತರೆ ವಸ್ತುಗಳು ಸಿಕ್ಕಿಹಾಕಿಕೊಂಡು ನೀರು ಸರಾಗವಾಗಿ ಹರಿಯದೆ ಸುತ್ತಮುತ್ತಲ ಜಮೀನುಗಳಿಗೆ ನುಗ್ಗುತ್ತದೆ. ಇದರಿಂದಾಗಿ ರೈತರು ಬೆಳೆದ ಬೆಳೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟವಾಗುತ್ತಿದೆ ಎಂದು ಕಿಡಿಕಾರಿದರು.
ಈ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿ ನಿರ್ವಹಣೆ ಸಂದರ್ಭದಲ್ಲಿ ಹಳೆಯ ಪೈಪ್ಗಳನ್ನು ತೆಗೆದು ಹೊಸದಾಗಿ ಸೇತುವೆಯನ್ನೇ ನಿರ್ಮಾಣ ಮಾಡಿ, ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ರೈತರೊಡಗೂಡಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತ ಮುಖಂಡರಾದ ಮುರಳೀಧರ್, ಭಾನುಪ್ರಕಾಶ್, ಸೊಗಪ್ಪ, ವೆಂಕಟಪ್ಪ, ಪ್ರಕಾಶ, ಚೇತನ, ಚೆನ್ನೇಗೌಡ, ಶಿವಣ್ಣ, ಶ್ರೀಧರ, ಸುರೇಶ್, ವೆಂಕಟೇಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…