ಮಂಡ್ಯ

ಮಂಡ್ಯ| ಶಾಸ್ತ್ರ ಹೇಳಿ ಭಯ ಹುಟ್ಟಿಸುತ್ತಿದ್ದ ಬುಡುಬುಡಿಕೆ ಜನರಿಗೆ ಚಳಿ ಬಿಡಿಸಿದ ಗ್ರಾಮಸ್ಥರು

ಮಂಡ್ಯ: ರಾತ್ರಿ ವೇಳೆ ಗ್ರಾಮಕ್ಕೆ ಬಂದು ಜನರಿಗೆ ಶಾಸ್ತ್ರ ಹೇಳಿ ಭಯ ಹುಟ್ಟಿಸುತ್ತಿದ್ದ ಬುಡುಬುಡಿಕೆ ಜನರಿಗೆ ಗ್ರಾಮಸ್ಥರೇ ಚಳಿ ಬಿಡಿಸಿದ ಘಟನೆ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದೆ.

ಬುಡುಬುಡಿಕೆ ಜನಾಂಗದ ಹಲವರು ರಾತ್ರಿ ವೇಳೆ ಗ್ರಾಮದಲ್ಲಿ ಬೀದಿಯಲ್ಲಿ ಸಂಚರಿಸಿ ಭಯ ಹುಟ್ಟಿಸುವ ರೀತಿಯೇ ಶಾಸ್ತ್ರ ಹೇಳುತ್ತಿದ್ದರು. ಇವರ ಭಯ ಹುಟ್ಟಿಸುವ ಭವಿಷ್ಯ ಹಾಗೂ ಶಾಸ್ತ್ರ ಕೇಳಿ ಸುತ್ತಮುತ್ತಲ ಊರಿನ ಜನರು ಆತಂಕಗೊಂಡಿದ್ದರು. ಒಂಟಿ ಮಹಿಳೆಯರಿದ್ದ ಮನೆಗೆ ಹೋಗಿ ವಿಚಿತ್ರ ರೀತಿಯ ಭಯ ಹುಟ್ಟಿಸುವ ಶಾಸ್ತ್ರ ಹೇಳಿ ಹಣ ಪಡೆಯುತ್ತಿದ್ದರು. ಗ್ರಾಮದ ಮುಖ್ಯ ಜಾಗದಲ್ಲೇ ನಿಂತು ಗ್ರಾಮಕ್ಕೆ ಆಪತ್ತು ಬರಲಿದೆ ಎಂದು ಹೇಳಿ ಭಯದ ವಾತಾವರಣ ಸೃಷ್ಟಿಸಿದ್ದರು.

ಬುಡುಬುಡಿಕೆಯವರ ಶಾಸ್ತ್ರದಿಂದ ಕಂಗಾಲಾಗಿದ್ದ ಗ್ರಾಮಸ್ಥರು, ಅವರು ತಂಗಿದ್ದ ಊರ ಹೊರಗಿನ ಜಾಗಕ್ಕೆ ಹೋಗಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥರ ತರಾಟೆ ಬಳಿಕ ಕ್ಷಮೆ ಕೋರಿದ ಬುಡುಬುಡಿಕೆಯವರು, ಮತ್ತೊಮ್ಮೆ ಗ್ರಾಮಕ್ಕೆ ಬಂದು ಈ ರೀತಿ ಮಾಡುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ. ಗ್ರಾಮಕ್ಕೆ ಇನ್ನೊಮ್ಮೆ ಗ್ರಾಮಕ್ಕೆ ಬಂದು ಈ ರೀತಿ ಉಪದ್ರವ ನೀಡಿದ್ರೆ ಪೊಲೀಸರಿಗೆ ಹಿಡಿದುಕೊಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

31 mins ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

50 mins ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

1 hour ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

1 hour ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

1 hour ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

2 hours ago