ಮಂಡ್ಯ: ರಾತ್ರಿ ವೇಳೆ ಗ್ರಾಮಕ್ಕೆ ಬಂದು ಜನರಿಗೆ ಶಾಸ್ತ್ರ ಹೇಳಿ ಭಯ ಹುಟ್ಟಿಸುತ್ತಿದ್ದ ಬುಡುಬುಡಿಕೆ ಜನರಿಗೆ ಗ್ರಾಮಸ್ಥರೇ ಚಳಿ ಬಿಡಿಸಿದ ಘಟನೆ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದೆ.
ಬುಡುಬುಡಿಕೆ ಜನಾಂಗದ ಹಲವರು ರಾತ್ರಿ ವೇಳೆ ಗ್ರಾಮದಲ್ಲಿ ಬೀದಿಯಲ್ಲಿ ಸಂಚರಿಸಿ ಭಯ ಹುಟ್ಟಿಸುವ ರೀತಿಯೇ ಶಾಸ್ತ್ರ ಹೇಳುತ್ತಿದ್ದರು. ಇವರ ಭಯ ಹುಟ್ಟಿಸುವ ಭವಿಷ್ಯ ಹಾಗೂ ಶಾಸ್ತ್ರ ಕೇಳಿ ಸುತ್ತಮುತ್ತಲ ಊರಿನ ಜನರು ಆತಂಕಗೊಂಡಿದ್ದರು. ಒಂಟಿ ಮಹಿಳೆಯರಿದ್ದ ಮನೆಗೆ ಹೋಗಿ ವಿಚಿತ್ರ ರೀತಿಯ ಭಯ ಹುಟ್ಟಿಸುವ ಶಾಸ್ತ್ರ ಹೇಳಿ ಹಣ ಪಡೆಯುತ್ತಿದ್ದರು. ಗ್ರಾಮದ ಮುಖ್ಯ ಜಾಗದಲ್ಲೇ ನಿಂತು ಗ್ರಾಮಕ್ಕೆ ಆಪತ್ತು ಬರಲಿದೆ ಎಂದು ಹೇಳಿ ಭಯದ ವಾತಾವರಣ ಸೃಷ್ಟಿಸಿದ್ದರು.
ಬುಡುಬುಡಿಕೆಯವರ ಶಾಸ್ತ್ರದಿಂದ ಕಂಗಾಲಾಗಿದ್ದ ಗ್ರಾಮಸ್ಥರು, ಅವರು ತಂಗಿದ್ದ ಊರ ಹೊರಗಿನ ಜಾಗಕ್ಕೆ ಹೋಗಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥರ ತರಾಟೆ ಬಳಿಕ ಕ್ಷಮೆ ಕೋರಿದ ಬುಡುಬುಡಿಕೆಯವರು, ಮತ್ತೊಮ್ಮೆ ಗ್ರಾಮಕ್ಕೆ ಬಂದು ಈ ರೀತಿ ಮಾಡುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ. ಗ್ರಾಮಕ್ಕೆ ಇನ್ನೊಮ್ಮೆ ಗ್ರಾಮಕ್ಕೆ ಬಂದು ಈ ರೀತಿ ಉಪದ್ರವ ನೀಡಿದ್ರೆ ಪೊಲೀಸರಿಗೆ ಹಿಡಿದುಕೊಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…