ಮಂಡ್ಯ: ರಾತ್ರಿ ವೇಳೆ ಗ್ರಾಮಕ್ಕೆ ಬಂದು ಜನರಿಗೆ ಶಾಸ್ತ್ರ ಹೇಳಿ ಭಯ ಹುಟ್ಟಿಸುತ್ತಿದ್ದ ಬುಡುಬುಡಿಕೆ ಜನರಿಗೆ ಗ್ರಾಮಸ್ಥರೇ ಚಳಿ ಬಿಡಿಸಿದ ಘಟನೆ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದೆ.
ಬುಡುಬುಡಿಕೆ ಜನಾಂಗದ ಹಲವರು ರಾತ್ರಿ ವೇಳೆ ಗ್ರಾಮದಲ್ಲಿ ಬೀದಿಯಲ್ಲಿ ಸಂಚರಿಸಿ ಭಯ ಹುಟ್ಟಿಸುವ ರೀತಿಯೇ ಶಾಸ್ತ್ರ ಹೇಳುತ್ತಿದ್ದರು. ಇವರ ಭಯ ಹುಟ್ಟಿಸುವ ಭವಿಷ್ಯ ಹಾಗೂ ಶಾಸ್ತ್ರ ಕೇಳಿ ಸುತ್ತಮುತ್ತಲ ಊರಿನ ಜನರು ಆತಂಕಗೊಂಡಿದ್ದರು. ಒಂಟಿ ಮಹಿಳೆಯರಿದ್ದ ಮನೆಗೆ ಹೋಗಿ ವಿಚಿತ್ರ ರೀತಿಯ ಭಯ ಹುಟ್ಟಿಸುವ ಶಾಸ್ತ್ರ ಹೇಳಿ ಹಣ ಪಡೆಯುತ್ತಿದ್ದರು. ಗ್ರಾಮದ ಮುಖ್ಯ ಜಾಗದಲ್ಲೇ ನಿಂತು ಗ್ರಾಮಕ್ಕೆ ಆಪತ್ತು ಬರಲಿದೆ ಎಂದು ಹೇಳಿ ಭಯದ ವಾತಾವರಣ ಸೃಷ್ಟಿಸಿದ್ದರು.
ಬುಡುಬುಡಿಕೆಯವರ ಶಾಸ್ತ್ರದಿಂದ ಕಂಗಾಲಾಗಿದ್ದ ಗ್ರಾಮಸ್ಥರು, ಅವರು ತಂಗಿದ್ದ ಊರ ಹೊರಗಿನ ಜಾಗಕ್ಕೆ ಹೋಗಿ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥರ ತರಾಟೆ ಬಳಿಕ ಕ್ಷಮೆ ಕೋರಿದ ಬುಡುಬುಡಿಕೆಯವರು, ಮತ್ತೊಮ್ಮೆ ಗ್ರಾಮಕ್ಕೆ ಬಂದು ಈ ರೀತಿ ಮಾಡುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾರೆ. ಗ್ರಾಮಕ್ಕೆ ಇನ್ನೊಮ್ಮೆ ಗ್ರಾಮಕ್ಕೆ ಬಂದು ಈ ರೀತಿ ಉಪದ್ರವ ನೀಡಿದ್ರೆ ಪೊಲೀಸರಿಗೆ ಹಿಡಿದುಕೊಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…