ಮಂಡ್ಯ

ಮಂಡ್ಯ | ಜಮೀನುಗಳಿಗೆ ನುಗ್ಗಿದ ನೀರು: ಬೆಳೆ ನಷ್ಟದ ಆತಂಕದಲ್ಲಿ ರೈತರು

ಮಂಡ್ಯ : ವಿಶ್ವೇಶ್ವರಯ್ಯ ನಾಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಏರಿ ಮೇಲಿನಿಂದ ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟಕ್ಕೆ ಕಾರಣವಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕಿನ ದೊಡ್ಡಗರುಡನಹಳ್ಳಿ ಗ್ರಾಮದ ಬಳಿ ರೈತರು ಪ್ರತಿಭಟನೆ ನಡೆಸಿದರು.

ತಾಲ್ಲೂಕಿನ ದೊಡ್ಡಗರುಡನಹಳ್ಳಿ ಬಳಿಯ ವಿಶ್ವೇಶ್ವರಯ್ಯ ನಾಲೆಯ ಕೊಪ್ಪ ವಿಭಾಗಕ್ಕೆ ಹರಿಯುವ ನಾಲೆ ಬಳಿ ಜಮಾಯಿಸಿದ ರೈತರು, ನೀರಾವರಿ ಇಲಾಖೆ ಅಽಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಹೂಳು ತುಂಬಿರುವುದರಿಂದ ನಾಲೆಯಲ್ಲಿ ಹರಿಯುತ್ತಿರುವ ನೀರು ಏರಿ ಮೇಲೆ ಹರಿದು ಜಮೀನುಗಳಿಗೆ ನುಗ್ಗುತ್ತಿದೆ. ಇದರಿಂದಾಗಿ ರೈತರ ಬೆಳೆ ನಾಶವಾಗುವುದರ ಜೊತೆಗೆ ಹೊಲ-ಗದ್ದೆಗಳಿಗೆ ತೆರಳಲು ಕಷ್ಟಸಾಧ್ಯವಾಗುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ:-ಚಾ.ನಗರ | ಇತಿಹಾಸ ಅರಿಯದವರಿಂದ ದಸರಾ ರದ್ದು ; ಸಾಹಿತಿ ಸೋಮಶೇಖರ್‌ ಬಿಸಲ್ವಾಡಿ

ಈ ಬಗ್ಗೆ ಸಹಾಯಕ ಕಾರ್ಯಪಾಲಕ ಅಭಿಯಂತರ ವಿದ್ಯಾಧರ್ ಮತ್ತು ನೀರುಗಂಟಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಅಧಿಕಾರಿಗಳ ನಿರ್ಲಕ್ಷ ದಿಂದಾಗಿ ನಾಲಾ ಏರಿಮೇಲೆ ಹೆಚ್ಚುವರಿ ನೀರು ಹರಿಯುತ್ತಿರುವುದರಿಂದಾಗಿ ಕಾಲುವೆ ಕೋಡಿ ರಸ್ತೆ ಹಾಳಾಗುತ್ತಿದೆ. ದೊಡ್ಡಗರುಡನಹಳ್ಳಿ ಬಳಿ ಮಂಡ್ಯ-ನಾಗಮಂಗಲ ರಸ್ತೆಯ ಮೇಲೂ ನೀರು ಹರಿಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇದನ್ನು ತಡೆಗಟ್ಟಲು ಮುಂದಾಗಲಿಲ್ಲ ಎಂದು ಕಿಡಿಕಾರಿದರು.

ತಕ್ಷಣ ಇದನ್ನು ಸರಿಪಡಿಸಿ ನಾಲೆಯಲ್ಲಿರುವ ಹೂಳು ತೆಗೆಸಬೇಕು. ಕೊನೇ ಭಾಗದ ರೈತರಿಗೆ ನೀರನ್ನೂ ಕೊಡುವುದರ ಜೊತೆಗೆ ನಾಲಾ ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗದಂತೆ ಎಚ್ಚರ ವಹಿಸಬೇಕು. ತಪ್ಪಿದಲ್ಲಿ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ಪಟೇಲ್ ಆನಂದ್, ಚನ್ನಕೇಶವ, ಮರೀಗೌಡ, ಶಾಮಿಯಾನ ಆನಂದ್, ಗ್ರಾ.ಪಂ. ಸದಸ್ಯ ಕುಮಾರ್, ಕೆಂಪೇಗೌಡ, ರುದ್ರೇಶ, ಪುಟ್ಟಸ್ವಾಮಿ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

6 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

20 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

20 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

20 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

20 hours ago