ಮಂಡ್ಯ

ಮಂಡ್ಯ | ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡಲ್ಲ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಮದ್ದೂರಿನಲ್ಲಿ ನಡೆದಂತಹ ಗಲಭೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಗುರುವಾರ ಮಳವಳ್ಳಿಯಲ್ಲೂ ಕೂಡ ಬಂದ್ ನಡೆದಿದೆ. ಅಲ್ಲೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿತ್ತು ಎಂದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಮದ್ದೂರಿನಲ್ಲಿ ಕಲ್ಲು ತೂರಾಟ ನಡೆಸಿದ ೨೨ ಜನರ ಮೇಲೆ ಎಫ್‌ಐ ಆರ್ ದಾಖಲಿಸಲಾಗಿದೆ. ಅದರ ಹಿಂದೆ ನಡೆದಿರುವ ಘಟನೆಗಳ ಕುರಿತು ತನಿಖೆಯ ನಂತರ ತಿಳಿಸಲಾಗುವುದು. ನಾಗಮಂಗಲ ಗಲಭೆಯಲ್ಲೂ ಕೂಡ ಸಂಬಂಧಪಟ್ಟವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಸ್ತುತ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಓಲೈಕೆ ಪ್ರಶ್ನೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

47 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

5 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

6 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

12 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

12 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

12 hours ago