ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಹಾಗೂ ಖಾಸಗಿ ವ್ಯಕ್ತಿಗಳಿಂದ ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿಸಲು ಸಾಧ್ಯವಾಗದ ಕಾರಣ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕೆ.ಆರ್.ಪೇಟೆ ತಾಲ್ಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಅವಿವಾಹಿತ ಯುವಕನೊಬ್ಬ ಜ.೨೫ರ ಶನಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಳಗೆರೆಮೆಣಸ ಗ್ರಾಮದ ಲೋಹಿತ್ಕುಮಾರ್ (೩೫) ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಬೇಸಾಯ ಹಾಗೂ ಮನೆಯ ಖರ್ಚಿಗೆಂದು ಅಗ್ರಹಾರ ಬಾಚಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೫೦ ಸಾವಿರ ರೂ. ಸಾಲ ಹಾಗೂ ಪಟ್ಟಣದಲ್ಲಿರುವ ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಲಕ್ಷಾಂತರ ರೂ. ಸಾಲ ಮಾಡಿದ್ದನು. ಜೊತೆಗೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳಿಂದಲೂ ಕೈಸಾಲ ಮಾಡಿಕೊಂಡಿದ್ದನು.
ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…
ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್ನ ಹೊರ್ಮುಜ್…
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…