Mysore
22
overcast clouds

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಮಂಡ್ಯ | ವಧು ಸಿಗಲೆಂದು ಮಾದಪ್ಪನೆಡೆಗೆ ಯುವಕರ ಪಾದಯಾತ್ರೆ

ಮಂಡ್ಯ : ಕಂಕಣ ಭಾಗ್ಯಕ್ಕಾಗಿ ರೈತ ಯುವಕರು ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಜಿಲ್ಲೆಯ ರೈತ ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂಬ ಕಾರಣಕ್ಕೆ ಕಂಕಣ ಭಾಗ್ಯಕ್ಕಾಗಿ ಹರಕೆ ಹೊತ್ತು ಯುವಕರು ಮಲೈ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ಹೊರಟಿದ್ದಾರೆ.

ಅವೈರಹಳ್ಳಿಯ ಬಹುತೇಕ ಯುವಕರು ಬ್ರಹ್ಮಚಾರಿಗಳಾಗಿದ್ದು, ಗ್ರಾಮದ 50ಕ್ಕೂ ಹೆಚ್ಚು ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಮೂರು ದಿನಗಳ ಕಾಲ ಕಾಲ್ನಡಿಗೆಯಲ್ಲಿ ಸಾಗುವ ಗ್ರಾಮಸ್ಥರು ಪಾದಯಾತ್ರೆ ಮಾಡಿದ್ರೆ ಹೆಣ್ಣು ಸಿಗುತ್ತೆ ಎಂಬ ನಂಬಿಕೆಯಿಂದ ಈ ಕಾರ್ಯ ಕೈಗೊಂಡಿದ್ದಾರೆ ಎನ್ನಲಾಗಿದೆ.

Tags:
error: Content is protected !!