ಮಂಡ್ಯ

ಮಂಡ್ಯ | ಬಿಸಿ ಊಟ ಯೋಜನೆ ಪರಿಶೀಲಿಸಿದ ಜಿ.ಪಂ ಸಿಇಒ

ಮಂಡ್ಯ : ತಾಲ್ಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಬಿಸಿ ಊಟ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು.
ಮಂಗಳವಾರ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಶಾಲೆಗೆ ಸರಬರಾಜಾಗಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟ ಪರಿಶೀಲಿಸಿದರು. ಬಿಸಿ ಊಟ ಯೋಜನೆಯಡಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ದಾಸ್ತಾನು ಪರಿಶೀಲನೆ ವೇಳೆ ಅಕ್ಕಿಯ ಗುಣಮಟ್ಟದಲ್ಲಿ ವ್ಯತ್ಯಾಸವಿದ್ದು, ಈ ಬಗ್ಗೆ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿ ವರದಿ ಸಲ್ಲಿಸಲು ಶಿಕ್ಷಣಾಧಿಕಾರಿ, ಮದ್ಯಾಹ್ನ ಉಪಹಾರ ಯೋಜನೆ ರವರಿಗೆ ಸೂಚಿಸಿದರು.
ಇತ್ತೀಚಿಗೆ ಶಾಲೆಗಳಿಗೆ ಸರಬರಾಜು ಮಾಡಲಾಗಿದ್ದ ತೊಗರಿಬೇಳೆ ಮತ್ತು ಎಣ್ಣೆಯನ್ನು ಪರಿಶೀಲನೆ ನಡೆಸಲಾಯಿತು. ನಿಗದಿತ ಅವಧಿಯೊಳಗೆ ಆಹಾರ ಸಾಮಗ್ರಿ ಗಳನ್ನು ಸರಬರಾಜು ಮಾಡುವಂತೆ ಹಾಗೂ ದಸರಾ ರಜೆಯ ಸಂದರ್ಭದಲ್ಲಿ ಆಹಾರ ಸಾಮಗ್ರಿಗಳು ಹಾಳಾಗದಂತೆ ಎಚ್ಚರ ವಹಿಸಲು SOP ಯಂತೆ ಕ್ರಮ ವಹಿಸಲು ಸೂಚಿಸಿದರು.
ಈ ವೇಳೆ ಶಾಲೆಯಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಶಾಲೆಯಲ್ಲಿನ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯಗೊಳಿಸಿ, ಗೈರು ಹಾಜರಾದ ವಿದ್ಯಾರ್ಥಿಗಳ ಪೋಷಕರಿಗೆ ತಿಳುವಳಿಕೆ ನೀಡಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು ಉತ್ತಮಗೊಳಿಸಿ ಎಂದು ಶಿಕ್ಷಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪದ್ಯಾಯರಾದ ಮೋಹನ್ ಸೇರಿದಂತೆ ಇತರರು ಹಾಜರಿದ್ದರು.
ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

7 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

21 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

21 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

21 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

21 hours ago