ಮಂಡ್ಯ

ಮಂಡ್ಯ | ಬಿಸಿ ಊಟ ಯೋಜನೆ ಪರಿಶೀಲಿಸಿದ ಜಿ.ಪಂ ಸಿಇಒ

ಮಂಡ್ಯ : ತಾಲ್ಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಬಿಸಿ ಊಟ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಪರಿಶೀಲನೆ ನಡೆಸಿದರು.
ಮಂಗಳವಾರ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಶಾಲೆಗೆ ಸರಬರಾಜಾಗಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟ ಪರಿಶೀಲಿಸಿದರು. ಬಿಸಿ ಊಟ ಯೋಜನೆಯಡಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಿಸುತ್ತಿರುವ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.
ದಾಸ್ತಾನು ಪರಿಶೀಲನೆ ವೇಳೆ ಅಕ್ಕಿಯ ಗುಣಮಟ್ಟದಲ್ಲಿ ವ್ಯತ್ಯಾಸವಿದ್ದು, ಈ ಬಗ್ಗೆ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಿ ವರದಿ ಸಲ್ಲಿಸಲು ಶಿಕ್ಷಣಾಧಿಕಾರಿ, ಮದ್ಯಾಹ್ನ ಉಪಹಾರ ಯೋಜನೆ ರವರಿಗೆ ಸೂಚಿಸಿದರು.
ಇತ್ತೀಚಿಗೆ ಶಾಲೆಗಳಿಗೆ ಸರಬರಾಜು ಮಾಡಲಾಗಿದ್ದ ತೊಗರಿಬೇಳೆ ಮತ್ತು ಎಣ್ಣೆಯನ್ನು ಪರಿಶೀಲನೆ ನಡೆಸಲಾಯಿತು. ನಿಗದಿತ ಅವಧಿಯೊಳಗೆ ಆಹಾರ ಸಾಮಗ್ರಿ ಗಳನ್ನು ಸರಬರಾಜು ಮಾಡುವಂತೆ ಹಾಗೂ ದಸರಾ ರಜೆಯ ಸಂದರ್ಭದಲ್ಲಿ ಆಹಾರ ಸಾಮಗ್ರಿಗಳು ಹಾಳಾಗದಂತೆ ಎಚ್ಚರ ವಹಿಸಲು SOP ಯಂತೆ ಕ್ರಮ ವಹಿಸಲು ಸೂಚಿಸಿದರು.
ಈ ವೇಳೆ ಶಾಲೆಯಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಶಾಲೆಯಲ್ಲಿನ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯಗೊಳಿಸಿ, ಗೈರು ಹಾಜರಾದ ವಿದ್ಯಾರ್ಥಿಗಳ ಪೋಷಕರಿಗೆ ತಿಳುವಳಿಕೆ ನೀಡಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು ಉತ್ತಮಗೊಳಿಸಿ ಎಂದು ಶಿಕ್ಷಕರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪದ್ಯಾಯರಾದ ಮೋಹನ್ ಸೇರಿದಂತೆ ಇತರರು ಹಾಜರಿದ್ದರು.
ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

15 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

16 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

16 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

16 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

16 hours ago