Mango procurement limit extended to 200 quintals.
ಬೆಂಗಳೂರು : ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್ನಂತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ.
ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ದಿ:25-06-2025ರಂದು ಆದೇಶ ಹೊರಡಿಸಲಾಗಿತ್ತು.
ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್ನAತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್ವರೆಗೆ ಮಿತಿಗೊಳಿಸಲಾಗಿತ್ತು ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್ಗೆ ವಿಸ್ತರಿಸಲಾಗಿದೆ.
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ ಮಾಡಿದ್ದು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…
ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…
ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…