ಮಂಡ್ಯ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮನ್‌ಮುಲ್‌ ಹೊಸ ದಾಖಲೆ

ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್‌ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು ಇದೇ ಮೊದಲು.

ಜಿಲ್ಲಾವಾರು ಹಾಲು ಸಂಗ್ರಹಣೆಯಲ್ಲಿ ಕಳೆದ 10 ವರ್ಷಗಳಿಂದ ಮನ್‌ಮುಲ್‌ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. 2015ರಲ್ಲಿ 7.71 ಲಕ್ಷ ಕಿಲೋ, 2016ರಲ್ಲಿ 7.88 ಲಕ್ಷ ಕಿಲೋ, 2017ರಲ್ಲಿ 9.18 ಲಕ್ಷ ಕಿಲೋ, 2018ರಲ್ಲಿ 9.34 ಲಕ್ಷ ಕಿಲೋ, 2019ರಲ್ಲಿ 9.19 ಲಕ್ಷ ಕಿಲೋ, 2020 ರಲ್ಲಿ 9.34 ಕಿಲೋ, 2021ರಲ್ಲಿ 9.73 ಲಕ್ಷ ಕಿಲೋ, 2022 ರಲ್ಲಿ 10.21 ಕಿಲೋ ಗರಿಷ್ಠ ಪ್ರಮಾಣದ ಹಾಲನ್ನು ಒಂದೇ ದಿನ ಸಂಗ್ರಹಿಸಿತ್ತು.

ಆದರೆ, ಈ ವರ್ಷ ಜೂನ್.‌18ರಂದು 11,23,680 ಕಿಲೋ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಸಾಮಾನ್ಯವಾಗಿ ಜೂನ್‌ ಕೊನೆಯ ವಾರ ಅಥವಾ ಜುಲೈನಲ್ಲಿ ಗರಿಷ್ಠ ಪ್ರಮಾಣದ ಹಾಲು ಮನ್‌ಮುಲ್‌ಗೆ ಪೂರೈಕೆಯಾಗುತ್ತಿತ್ತು. ಈ ಬಾರಿ ಜೂನ್‌ ಮೂರನೇ ವಾರದಲ್ಲೇ ಗರಿಷ್ಠ ಪ್ರಮಾಣದ ಹಾಲು ಸಂಗ್ರಹವಾಗಿದೆ. ಈ ಮೂಲಕ ತನ್ನದೇ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.

11.23 ಲಕ್ಷ ಕಿಲೋ ಹಾಲು ಸಂಗ್ರಹಿಸುತ್ತಿರುವ ಮಂಡ್ಯ ಒಕ್ಕೂಟ 4ನೇ ಸ್ಥಾನದಲ್ಲಿದೆ. ಆದರೆ, ಜಿಲ್ಲಾವಾರು ಪಟ್ಟಿಯಲ್ಲಿ ಮಂಡ್ಯ ಮೊದಲ ಸ್ಥಾನದಲ್ಲಿದೆ. ಬೆಂಗಳೂರು, ಹಾಸನ, ಕೋಲಾರ ಒಕ್ಕೂಟ 2-3 ಜಿಲ್ಲೆಗಳನ್ನು ಒಳಗೊಂಡಿದ್ದರೂ, ಅವುಗಳು ಸಂಗ್ರಹಿಸುವ ಹಾಲಿನ ಪ್ರಮಾಣ ಮನ್‌ಮುಲ್‌ನ ಅರ್ಧದಷ್ಟೂ ಇಲ್ಲ. ಆದರೆ ಮನ್‌ಮುಲ್‌ ವ್ಯಾಪ್ತಿಯಲ್ಲಿರುವ ಏಕೈಕ ಜಿಲ್ಲೆ ಮಂಡ್ಯ.

ಮಂಡ್ಯ ಜಿಲ್ಲೆಯಲ್ಲಿ ನಿತ್ಯ ಸುಮಾರು 18 ಲಕ್ಷ ಕೆಜಿಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಮನ್‌ಮುಲ್‌ಗೆ ಪೂರೈಕೆಯಾಗುತ್ತಿರುವ ಹಾಲಿನ ಹೊರತಾಗಿ ಉಳಿದದ್ದು ಸ್ಥಳೀಯವಾಗಿ ಮಾರಾಟವಾಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ 1308 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, 1299 ಸಂಘಗಳು ಹಾಲು ಸಂಗ್ರಹಿಸುತ್ತಿವೆ. ಇವುಗಳಲ್ಲಿ 583 ಮಹಿಳಾ ಸರ್ಕಾರ ಸಂಘಗಳಿವೆ. 2,73,955 ಒಟ್ಟು ಸದಸ್ಯರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹಾಲು ಪೂರೈಸುವ ಸಕ್ರಿಯ ಸದಸ್ಯರಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

8 hours ago

ಮೊಟ್ಟೆಯಲ್ಲಿ ಕ್ಯಾನ್ಸರ್‌ ಅಂಶ : ವರದಿ ನೀಡಲು ಸೂಚಿಸಿದ ಆರೋಗ್ಯ ಇಲಾಖೆ

ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…

9 hours ago

ಹವಾಮಾನ ವೈಪರೀತ್ಯ : ವಿಮಾನದಲ್ಲೇ ಸಿಲುಕಿದ್ದ ಕರ್ನಾಟಕದ 21 ಶಾಸಕರು ಮತ್ತು 7 ಸಚಿವರು

ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…

9 hours ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…

10 hours ago

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…

10 hours ago

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

12 hours ago