ಮಂಡ್ಯ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮನ್‌ಮುಲ್‌ ಹೊಸ ದಾಖಲೆ

ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್‌ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು ಇದೇ ಮೊದಲು.

ಜಿಲ್ಲಾವಾರು ಹಾಲು ಸಂಗ್ರಹಣೆಯಲ್ಲಿ ಕಳೆದ 10 ವರ್ಷಗಳಿಂದ ಮನ್‌ಮುಲ್‌ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. 2015ರಲ್ಲಿ 7.71 ಲಕ್ಷ ಕಿಲೋ, 2016ರಲ್ಲಿ 7.88 ಲಕ್ಷ ಕಿಲೋ, 2017ರಲ್ಲಿ 9.18 ಲಕ್ಷ ಕಿಲೋ, 2018ರಲ್ಲಿ 9.34 ಲಕ್ಷ ಕಿಲೋ, 2019ರಲ್ಲಿ 9.19 ಲಕ್ಷ ಕಿಲೋ, 2020 ರಲ್ಲಿ 9.34 ಕಿಲೋ, 2021ರಲ್ಲಿ 9.73 ಲಕ್ಷ ಕಿಲೋ, 2022 ರಲ್ಲಿ 10.21 ಕಿಲೋ ಗರಿಷ್ಠ ಪ್ರಮಾಣದ ಹಾಲನ್ನು ಒಂದೇ ದಿನ ಸಂಗ್ರಹಿಸಿತ್ತು.

ಆದರೆ, ಈ ವರ್ಷ ಜೂನ್.‌18ರಂದು 11,23,680 ಕಿಲೋ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಸಾಮಾನ್ಯವಾಗಿ ಜೂನ್‌ ಕೊನೆಯ ವಾರ ಅಥವಾ ಜುಲೈನಲ್ಲಿ ಗರಿಷ್ಠ ಪ್ರಮಾಣದ ಹಾಲು ಮನ್‌ಮುಲ್‌ಗೆ ಪೂರೈಕೆಯಾಗುತ್ತಿತ್ತು. ಈ ಬಾರಿ ಜೂನ್‌ ಮೂರನೇ ವಾರದಲ್ಲೇ ಗರಿಷ್ಠ ಪ್ರಮಾಣದ ಹಾಲು ಸಂಗ್ರಹವಾಗಿದೆ. ಈ ಮೂಲಕ ತನ್ನದೇ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.

11.23 ಲಕ್ಷ ಕಿಲೋ ಹಾಲು ಸಂಗ್ರಹಿಸುತ್ತಿರುವ ಮಂಡ್ಯ ಒಕ್ಕೂಟ 4ನೇ ಸ್ಥಾನದಲ್ಲಿದೆ. ಆದರೆ, ಜಿಲ್ಲಾವಾರು ಪಟ್ಟಿಯಲ್ಲಿ ಮಂಡ್ಯ ಮೊದಲ ಸ್ಥಾನದಲ್ಲಿದೆ. ಬೆಂಗಳೂರು, ಹಾಸನ, ಕೋಲಾರ ಒಕ್ಕೂಟ 2-3 ಜಿಲ್ಲೆಗಳನ್ನು ಒಳಗೊಂಡಿದ್ದರೂ, ಅವುಗಳು ಸಂಗ್ರಹಿಸುವ ಹಾಲಿನ ಪ್ರಮಾಣ ಮನ್‌ಮುಲ್‌ನ ಅರ್ಧದಷ್ಟೂ ಇಲ್ಲ. ಆದರೆ ಮನ್‌ಮುಲ್‌ ವ್ಯಾಪ್ತಿಯಲ್ಲಿರುವ ಏಕೈಕ ಜಿಲ್ಲೆ ಮಂಡ್ಯ.

ಮಂಡ್ಯ ಜಿಲ್ಲೆಯಲ್ಲಿ ನಿತ್ಯ ಸುಮಾರು 18 ಲಕ್ಷ ಕೆಜಿಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಮನ್‌ಮುಲ್‌ಗೆ ಪೂರೈಕೆಯಾಗುತ್ತಿರುವ ಹಾಲಿನ ಹೊರತಾಗಿ ಉಳಿದದ್ದು ಸ್ಥಳೀಯವಾಗಿ ಮಾರಾಟವಾಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ 1308 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, 1299 ಸಂಘಗಳು ಹಾಲು ಸಂಗ್ರಹಿಸುತ್ತಿವೆ. ಇವುಗಳಲ್ಲಿ 583 ಮಹಿಳಾ ಸರ್ಕಾರ ಸಂಘಗಳಿವೆ. 2,73,955 ಒಟ್ಟು ಸದಸ್ಯರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹಾಲು ಪೂರೈಸುವ ಸಕ್ರಿಯ ಸದಸ್ಯರಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago