ಮಂಡ್ಯ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮನ್‌ಮುಲ್‌ ಹೊಸ ದಾಖಲೆ

ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್‌ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು ಇದೇ ಮೊದಲು.

ಜಿಲ್ಲಾವಾರು ಹಾಲು ಸಂಗ್ರಹಣೆಯಲ್ಲಿ ಕಳೆದ 10 ವರ್ಷಗಳಿಂದ ಮನ್‌ಮುಲ್‌ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. 2015ರಲ್ಲಿ 7.71 ಲಕ್ಷ ಕಿಲೋ, 2016ರಲ್ಲಿ 7.88 ಲಕ್ಷ ಕಿಲೋ, 2017ರಲ್ಲಿ 9.18 ಲಕ್ಷ ಕಿಲೋ, 2018ರಲ್ಲಿ 9.34 ಲಕ್ಷ ಕಿಲೋ, 2019ರಲ್ಲಿ 9.19 ಲಕ್ಷ ಕಿಲೋ, 2020 ರಲ್ಲಿ 9.34 ಕಿಲೋ, 2021ರಲ್ಲಿ 9.73 ಲಕ್ಷ ಕಿಲೋ, 2022 ರಲ್ಲಿ 10.21 ಕಿಲೋ ಗರಿಷ್ಠ ಪ್ರಮಾಣದ ಹಾಲನ್ನು ಒಂದೇ ದಿನ ಸಂಗ್ರಹಿಸಿತ್ತು.

ಆದರೆ, ಈ ವರ್ಷ ಜೂನ್.‌18ರಂದು 11,23,680 ಕಿಲೋ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಸಾಮಾನ್ಯವಾಗಿ ಜೂನ್‌ ಕೊನೆಯ ವಾರ ಅಥವಾ ಜುಲೈನಲ್ಲಿ ಗರಿಷ್ಠ ಪ್ರಮಾಣದ ಹಾಲು ಮನ್‌ಮುಲ್‌ಗೆ ಪೂರೈಕೆಯಾಗುತ್ತಿತ್ತು. ಈ ಬಾರಿ ಜೂನ್‌ ಮೂರನೇ ವಾರದಲ್ಲೇ ಗರಿಷ್ಠ ಪ್ರಮಾಣದ ಹಾಲು ಸಂಗ್ರಹವಾಗಿದೆ. ಈ ಮೂಲಕ ತನ್ನದೇ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.

11.23 ಲಕ್ಷ ಕಿಲೋ ಹಾಲು ಸಂಗ್ರಹಿಸುತ್ತಿರುವ ಮಂಡ್ಯ ಒಕ್ಕೂಟ 4ನೇ ಸ್ಥಾನದಲ್ಲಿದೆ. ಆದರೆ, ಜಿಲ್ಲಾವಾರು ಪಟ್ಟಿಯಲ್ಲಿ ಮಂಡ್ಯ ಮೊದಲ ಸ್ಥಾನದಲ್ಲಿದೆ. ಬೆಂಗಳೂರು, ಹಾಸನ, ಕೋಲಾರ ಒಕ್ಕೂಟ 2-3 ಜಿಲ್ಲೆಗಳನ್ನು ಒಳಗೊಂಡಿದ್ದರೂ, ಅವುಗಳು ಸಂಗ್ರಹಿಸುವ ಹಾಲಿನ ಪ್ರಮಾಣ ಮನ್‌ಮುಲ್‌ನ ಅರ್ಧದಷ್ಟೂ ಇಲ್ಲ. ಆದರೆ ಮನ್‌ಮುಲ್‌ ವ್ಯಾಪ್ತಿಯಲ್ಲಿರುವ ಏಕೈಕ ಜಿಲ್ಲೆ ಮಂಡ್ಯ.

ಮಂಡ್ಯ ಜಿಲ್ಲೆಯಲ್ಲಿ ನಿತ್ಯ ಸುಮಾರು 18 ಲಕ್ಷ ಕೆಜಿಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಮನ್‌ಮುಲ್‌ಗೆ ಪೂರೈಕೆಯಾಗುತ್ತಿರುವ ಹಾಲಿನ ಹೊರತಾಗಿ ಉಳಿದದ್ದು ಸ್ಥಳೀಯವಾಗಿ ಮಾರಾಟವಾಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ 1308 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, 1299 ಸಂಘಗಳು ಹಾಲು ಸಂಗ್ರಹಿಸುತ್ತಿವೆ. ಇವುಗಳಲ್ಲಿ 583 ಮಹಿಳಾ ಸರ್ಕಾರ ಸಂಘಗಳಿವೆ. 2,73,955 ಒಟ್ಟು ಸದಸ್ಯರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹಾಲು ಪೂರೈಸುವ ಸಕ್ರಿಯ ಸದಸ್ಯರಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

5 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

8 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

9 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

9 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

9 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

9 hours ago