ಮಂಡ್ಯ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮನ್‌ಮುಲ್‌ ಹೊಸ ದಾಖಲೆ

ಮಂಡ್ಯ: ಮಂಡ್ಯ ಜಿಲ್ಲಾವಾರು ಒಕ್ಕೂಟ 11 ಲಕ್ಷ ಕಿಲೋಗೂ ಅಧಿಕ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಮನ್‌ಮುಲ್‌ ಇತಿಹಾಸದಲ್ಲೇ ಇಷ್ಟೊಂದು ಪ್ರಮಾಣದ ಹಾಲು ಸಂಗ್ರಹಿಸುತ್ತಿರುವುದು ಇದೇ ಮೊದಲು.

ಜಿಲ್ಲಾವಾರು ಹಾಲು ಸಂಗ್ರಹಣೆಯಲ್ಲಿ ಕಳೆದ 10 ವರ್ಷಗಳಿಂದ ಮನ್‌ಮುಲ್‌ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. 2015ರಲ್ಲಿ 7.71 ಲಕ್ಷ ಕಿಲೋ, 2016ರಲ್ಲಿ 7.88 ಲಕ್ಷ ಕಿಲೋ, 2017ರಲ್ಲಿ 9.18 ಲಕ್ಷ ಕಿಲೋ, 2018ರಲ್ಲಿ 9.34 ಲಕ್ಷ ಕಿಲೋ, 2019ರಲ್ಲಿ 9.19 ಲಕ್ಷ ಕಿಲೋ, 2020 ರಲ್ಲಿ 9.34 ಕಿಲೋ, 2021ರಲ್ಲಿ 9.73 ಲಕ್ಷ ಕಿಲೋ, 2022 ರಲ್ಲಿ 10.21 ಕಿಲೋ ಗರಿಷ್ಠ ಪ್ರಮಾಣದ ಹಾಲನ್ನು ಒಂದೇ ದಿನ ಸಂಗ್ರಹಿಸಿತ್ತು.

ಆದರೆ, ಈ ವರ್ಷ ಜೂನ್.‌18ರಂದು 11,23,680 ಕಿಲೋ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಸಾಮಾನ್ಯವಾಗಿ ಜೂನ್‌ ಕೊನೆಯ ವಾರ ಅಥವಾ ಜುಲೈನಲ್ಲಿ ಗರಿಷ್ಠ ಪ್ರಮಾಣದ ಹಾಲು ಮನ್‌ಮುಲ್‌ಗೆ ಪೂರೈಕೆಯಾಗುತ್ತಿತ್ತು. ಈ ಬಾರಿ ಜೂನ್‌ ಮೂರನೇ ವಾರದಲ್ಲೇ ಗರಿಷ್ಠ ಪ್ರಮಾಣದ ಹಾಲು ಸಂಗ್ರಹವಾಗಿದೆ. ಈ ಮೂಲಕ ತನ್ನದೇ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.

11.23 ಲಕ್ಷ ಕಿಲೋ ಹಾಲು ಸಂಗ್ರಹಿಸುತ್ತಿರುವ ಮಂಡ್ಯ ಒಕ್ಕೂಟ 4ನೇ ಸ್ಥಾನದಲ್ಲಿದೆ. ಆದರೆ, ಜಿಲ್ಲಾವಾರು ಪಟ್ಟಿಯಲ್ಲಿ ಮಂಡ್ಯ ಮೊದಲ ಸ್ಥಾನದಲ್ಲಿದೆ. ಬೆಂಗಳೂರು, ಹಾಸನ, ಕೋಲಾರ ಒಕ್ಕೂಟ 2-3 ಜಿಲ್ಲೆಗಳನ್ನು ಒಳಗೊಂಡಿದ್ದರೂ, ಅವುಗಳು ಸಂಗ್ರಹಿಸುವ ಹಾಲಿನ ಪ್ರಮಾಣ ಮನ್‌ಮುಲ್‌ನ ಅರ್ಧದಷ್ಟೂ ಇಲ್ಲ. ಆದರೆ ಮನ್‌ಮುಲ್‌ ವ್ಯಾಪ್ತಿಯಲ್ಲಿರುವ ಏಕೈಕ ಜಿಲ್ಲೆ ಮಂಡ್ಯ.

ಮಂಡ್ಯ ಜಿಲ್ಲೆಯಲ್ಲಿ ನಿತ್ಯ ಸುಮಾರು 18 ಲಕ್ಷ ಕೆಜಿಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಮನ್‌ಮುಲ್‌ಗೆ ಪೂರೈಕೆಯಾಗುತ್ತಿರುವ ಹಾಲಿನ ಹೊರತಾಗಿ ಉಳಿದದ್ದು ಸ್ಥಳೀಯವಾಗಿ ಮಾರಾಟವಾಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ 1308 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, 1299 ಸಂಘಗಳು ಹಾಲು ಸಂಗ್ರಹಿಸುತ್ತಿವೆ. ಇವುಗಳಲ್ಲಿ 583 ಮಹಿಳಾ ಸರ್ಕಾರ ಸಂಘಗಳಿವೆ. 2,73,955 ಒಟ್ಟು ಸದಸ್ಯರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಹಾಲು ಪೂರೈಸುವ ಸಕ್ರಿಯ ಸದಸ್ಯರಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಳೆಗಾಲ ಶುರುವಾದರೆ ವಿದ್ಯುತ್ ಸಮಸ್ಯೆ !

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಬಹುತೇಕ ಪ್ರದೇಶಗಳು ಬೆಟ್ಟಗುಡ್ಡ ಹಾಗೂ ಅರಣ್ಯ ಅಂಚಿನ ಪ್ರದೇಶಗಳಿಂದ ಕೂಡಿದ್ದು, ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ…

2 hours ago

ಕನಿಷ್ಠ ಸೌಲಭ್ಯಗಳೂ ಇಲ್ಲದ ಮಂಡ್ಯ ತಾಲ್ಲೂಕು ಕಚೇರಿ

ಹೇಮಂತ್ ಕುಮಾರ್ ಜಾತಿ, ಆದಾಯ ಪ್ರಮಾಣ ಪತ್ರಕ್ಕೂ ಅಲೆದಾಟ; ಸರತಿ ಸಾಲಿನಲ್ಲಿ ನಿಂತು ಜನರ ಗೊಣಗಾಟ ಮಂಡ್ಯ: ತಾಲ್ಲೂಕು ಕೇಂದ್ರವಾದ…

2 hours ago

ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಅನ್ನದಾತರು

ಎಂ.ನಾರಾಯಣ ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ…

2 hours ago

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

21 hours ago