ಮಳವಳ್ಳಿ: ಕಳೆದ ಮೂರು ದಿನದ ಹಿಂದೆ ಅಟುವನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು, ಸಾಹಳ್ಳಿ ಗ್ರಾಮದ ಸಿದ್ದರಾಜು (37) ತಲೆಗೆ ತೀವ್ರ ಪೆಟ್ಟು ಬಿದ್ದು, ಮಿದುಳು ನಿಷ್ಕ್ರಿಯಗೊಂಡಿದೆ.
ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ನೇತೃತ್ವದಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಸ್ನೇಹಿತರು ಹಾಗೂ ವೈದ್ಯರ ಸಲಹೆಯ ಮೇರೆಗೆ ಕುಟುಂಬ ಸದಸ್ಯರು ಸಾವಿನ ನೋವಿನಲ್ಲೂ ಮಾನವೀಯತೆಯಿಂದ ಅಂಗಾಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದರಿಂದ ಸಿದ್ದರಾಜು ಅವರನ್ನು ಮೈಸೂರಿಗೆ ಕರೆದುಕೊಂಡು ಹೋದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೋಮವಾರ ಮಧ್ಯಾಹ್ನ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದು ಕುಟುಂಬಸ್ಥರಿಗೆ ಸ್ವಾಂತನ ಹೇಳಿ ಅವರ ನಿರ್ಧಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
‘ಶಾಸಕನಾಗಿ ಅವರ ಕುಟುಂಬಕ್ಕೆ ನೆರವಾಗುವ ಪ್ರಯತ್ನ ನಡೆಸಲಾಗುವುದು. ವಾಸ್ತವ ಮತ್ತು ಸಾಂದರ್ಭಿಕತೆಯನ್ನು ಅರ್ಥ ಮಾಡಿಕೊಂಡು ತೀರ್ಮಾನ ತೆಗೆದುಕೊಂಡರೆ ಹಲವಾರು ಜೀವಗಳನ್ನು ಉಳಿಸಬಹುದು. ಹೃದಯ, ಶ್ವಾಸಕೋಶ, ಕಿಡ್ನಿ, ಕಣ್ಣು ಸೇರಿದಂತೆ ಕೆಲವು ಅಂಗಗಳು ಮತ್ತೊಬ್ಬರಿಗೆ ನೆರವಾಗಲಿದೆ’ ಎಂದರು.
ಬೆಂಗಳೂರು : ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…
ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…
ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…
ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…
ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…