ಮಂಡ್ಯ

ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಅಂಗಾಂಗ ದಾನಕ್ಕೆ ನಿರ್ಧಾರ

ಮಳವಳ್ಳಿ: ಕಳೆದ ಮೂರು ದಿನದ ಹಿಂದೆ ಅಟುವನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು, ಸಾಹಳ್ಳಿ ಗ್ರಾಮದ ಸಿದ್ದರಾಜು (37) ತಲೆಗೆ ತೀವ್ರ ಪೆಟ್ಟು ಬಿದ್ದು, ಮಿದುಳು ನಿಷ್ಕ್ರಿಯಗೊಂಡಿದೆ.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ನೇತೃತ್ವದಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಸ್ನೇಹಿತರು ಹಾಗೂ ವೈದ್ಯರ ಸಲಹೆಯ ಮೇರೆಗೆ ಕುಟುಂಬ ಸದಸ್ಯರು ಸಾವಿನ ನೋವಿನಲ್ಲೂ ಮಾನವೀಯತೆಯಿಂದ ಅಂಗಾಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದರಿಂದ ಸಿದ್ದರಾಜು ಅವರನ್ನು ಮೈಸೂರಿಗೆ ಕರೆದುಕೊಂಡು ಹೋದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೋಮವಾರ ಮಧ್ಯಾಹ್ನ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದು ಕುಟುಂಬಸ್ಥರಿಗೆ ಸ್ವಾಂತನ ಹೇಳಿ ಅವರ ನಿರ್ಧಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

‘ಶಾಸಕನಾಗಿ ಅವರ ಕುಟುಂಬಕ್ಕೆ ನೆರವಾಗುವ ಪ್ರಯತ್ನ ನಡೆಸಲಾಗುವುದು. ವಾಸ್ತವ ಮತ್ತು ಸಾಂದರ್ಭಿಕತೆಯನ್ನು ಅರ್ಥ ಮಾಡಿಕೊಂಡು ತೀರ್ಮಾನ ತೆಗೆದುಕೊಂಡರೆ ಹಲವಾರು ಜೀವಗಳನ್ನು ಉಳಿಸಬಹುದು. ಹೃದಯ, ಶ್ವಾಸಕೋಶ, ಕಿಡ್ನಿ, ಕಣ್ಣು ಸೇರಿದಂತೆ ಕೆಲವು ಅಂಗಗಳು ಮತ್ತೊಬ್ಬರಿಗೆ ನೆರವಾಗಲಿದೆ’ ಎಂದರು.

andolana

Recent Posts

ರಾಷ್ಟ್ರ, ರಾಜ್ಯ ರಾಜಕಾರಣದ ರಂಗು

೨೦೨೫ರ ಅವಧಿಯಲ್ಲಿ ರಾಜಕೀಯವಾಗಿ ಗಂಭೀರ ವಿಪ್ಲವಗಳನ್ನು ಕಾಣದೆ ಹೋದರೂ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದಷ್ಟು ಬದಲಾವಣೆಗಳು ನಡೆದಿರುವುದು…

1 min ago

ಅವಧಿಗೂ ಮುನ್ನ ಶಾಲೆಗೆ ಬೀಗ; ಕಲಿಕೆಗೆ ಹಿನ್ನಡೆ

ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ  ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ…

11 mins ago

2026ರ ಸ್ವಾಗತಕ್ಕೆ ತಾಣಗಳೆಡೆಗೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…

16 mins ago

ಮೈಸೂರು ನಗರ ಸಾರಿಗೆ: ಹಳೆ ಬಸ್‌ಗಳಿಗೆ ಹೊಸ ರೂಪ?

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…

21 mins ago

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

8 hours ago