ಮಂಡ್ಯ

ಅಪಘಾತದಲ್ಲಿ ಮಿದುಳು ನಿಷ್ಕ್ರಿಯ: ಅಂಗಾಂಗ ದಾನಕ್ಕೆ ನಿರ್ಧಾರ

ಮಳವಳ್ಳಿ: ಕಳೆದ ಮೂರು ದಿನದ ಹಿಂದೆ ಅಟುವನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು, ಸಾಹಳ್ಳಿ ಗ್ರಾಮದ ಸಿದ್ದರಾಜು (37) ತಲೆಗೆ ತೀವ್ರ ಪೆಟ್ಟು ಬಿದ್ದು, ಮಿದುಳು ನಿಷ್ಕ್ರಿಯಗೊಂಡಿದೆ.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ನೇತೃತ್ವದಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಸ್ನೇಹಿತರು ಹಾಗೂ ವೈದ್ಯರ ಸಲಹೆಯ ಮೇರೆಗೆ ಕುಟುಂಬ ಸದಸ್ಯರು ಸಾವಿನ ನೋವಿನಲ್ಲೂ ಮಾನವೀಯತೆಯಿಂದ ಅಂಗಾಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದರಿಂದ ಸಿದ್ದರಾಜು ಅವರನ್ನು ಮೈಸೂರಿಗೆ ಕರೆದುಕೊಂಡು ಹೋದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೋಮವಾರ ಮಧ್ಯಾಹ್ನ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದು ಕುಟುಂಬಸ್ಥರಿಗೆ ಸ್ವಾಂತನ ಹೇಳಿ ಅವರ ನಿರ್ಧಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

‘ಶಾಸಕನಾಗಿ ಅವರ ಕುಟುಂಬಕ್ಕೆ ನೆರವಾಗುವ ಪ್ರಯತ್ನ ನಡೆಸಲಾಗುವುದು. ವಾಸ್ತವ ಮತ್ತು ಸಾಂದರ್ಭಿಕತೆಯನ್ನು ಅರ್ಥ ಮಾಡಿಕೊಂಡು ತೀರ್ಮಾನ ತೆಗೆದುಕೊಂಡರೆ ಹಲವಾರು ಜೀವಗಳನ್ನು ಉಳಿಸಬಹುದು. ಹೃದಯ, ಶ್ವಾಸಕೋಶ, ಕಿಡ್ನಿ, ಕಣ್ಣು ಸೇರಿದಂತೆ ಕೆಲವು ಅಂಗಗಳು ಮತ್ತೊಬ್ಬರಿಗೆ ನೆರವಾಗಲಿದೆ’ ಎಂದರು.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

9 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

9 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

9 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

9 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

9 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago