ಮಳವಳ್ಳಿ: ಕಳೆದ ಮೂರು ದಿನದ ಹಿಂದೆ ಅಟುವನಹಳ್ಳಿ ಗೇಟ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು, ಸಾಹಳ್ಳಿ ಗ್ರಾಮದ ಸಿದ್ದರಾಜು (37) ತಲೆಗೆ ತೀವ್ರ ಪೆಟ್ಟು ಬಿದ್ದು, ಮಿದುಳು ನಿಷ್ಕ್ರಿಯಗೊಂಡಿದೆ.
ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ನೇತೃತ್ವದಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಸ್ನೇಹಿತರು ಹಾಗೂ ವೈದ್ಯರ ಸಲಹೆಯ ಮೇರೆಗೆ ಕುಟುಂಬ ಸದಸ್ಯರು ಸಾವಿನ ನೋವಿನಲ್ಲೂ ಮಾನವೀಯತೆಯಿಂದ ಅಂಗಾಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದರಿಂದ ಸಿದ್ದರಾಜು ಅವರನ್ನು ಮೈಸೂರಿಗೆ ಕರೆದುಕೊಂಡು ಹೋದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೋಮವಾರ ಮಧ್ಯಾಹ್ನ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದು ಕುಟುಂಬಸ್ಥರಿಗೆ ಸ್ವಾಂತನ ಹೇಳಿ ಅವರ ನಿರ್ಧಾರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
‘ಶಾಸಕನಾಗಿ ಅವರ ಕುಟುಂಬಕ್ಕೆ ನೆರವಾಗುವ ಪ್ರಯತ್ನ ನಡೆಸಲಾಗುವುದು. ವಾಸ್ತವ ಮತ್ತು ಸಾಂದರ್ಭಿಕತೆಯನ್ನು ಅರ್ಥ ಮಾಡಿಕೊಂಡು ತೀರ್ಮಾನ ತೆಗೆದುಕೊಂಡರೆ ಹಲವಾರು ಜೀವಗಳನ್ನು ಉಳಿಸಬಹುದು. ಹೃದಯ, ಶ್ವಾಸಕೋಶ, ಕಿಡ್ನಿ, ಕಣ್ಣು ಸೇರಿದಂತೆ ಕೆಲವು ಅಂಗಗಳು ಮತ್ತೊಬ್ಬರಿಗೆ ನೆರವಾಗಲಿದೆ’ ಎಂದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…