ಮಂಡ್ಯ: ಕಳೆದ 24ರ ಶುಕ್ರವಾರ ರಾತ್ರಿ ಶ್ರೀರಂಗಪಟ್ಟಣ ತಾಲ್ಲೂಕು ಕೆ.ಆರ್.ಸಾಗರದ ಸಂತೆಮಾಳದ ಮುಖ್ಯ ರಸ್ತೆಯಲ್ಲಿ ನಾಯಿ ಅಡ್ಡ ಬಂದು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಹುಲಿಕರೆ ಗ್ರಾಮದ ರವಿಚಂದ್ರ (29) ಚಿಕಿತ್ಸೆ ಫಲಕಾರಿಯಾಗದೆ ಇಂದು ( ಮೇ 28 ) ಬೆಳಗ್ಗೆ ನಿಧನ ಹೊಂದಿದ್ದಾರೆ.
ರವಿಚಂದ್ರ ಕೆ.ಆರ್.ಸಾಗರ ಸಮೀಪದ ಹುಲಿಕರೆ ಗ್ರಾಮದಲ್ಲಿ ವಾಸವಾಗಿದ್ದು ಸಲೂನ್ ನಡೆಸುತ್ತಿದ್ದರು. ಶುಕ್ರವಾರ ರಾತ್ರಿ ಕೆ.ಆರ್.ಸಾಗರದಲ್ಲಿನ ಅಂಗಡಿಗೆ ಹೋಗಿ ವಾಪಸ್ಸ್ ಹುಲಿಕರೆಯ ತಮ್ಮ ನಿವಾಸಕ್ಕೆ ಬರುವಾಗಿ ನಾಯಿಯೊಂದು ಬೈಕ್ಗೆ ಅಡ್ಡಬಂದು ಅಪಘಾತವಾಗಿತ್ತು. ಬಳಿಕ ಆತನನ್ನು ಮೈಸೂರು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆತರ್ವ ಆರ್.ವಿ.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರವಿಚಂದ್ರ ದೇಹ ನಿಷ್ಕ್ರಿಯಗೊಂಡ ಕಾರಣ ಮೃತನ ಪತ್ನಿ ರಂಜಿತ ತನ್ನ ಪತಿ ದೇಹದ ಅಂಗಾಗಳು ಇತರೆ ಜನರಿಗೆ ಸಹಾಯವಾಗಲಿ ಎಂದು ಮಾನವೀಯತೆ ಮೆರೆದು ರವಿಚಂದ್ರ ಕಿಡ್ನಿ, ಚರ್ಮ, ಹೃದಯ ಸೇರಿ ದೇಹದ ಹಲವು ಭಾಗಗಳನ್ನು ದಾನ ನೀಡಿದ್ದಾರೆ.
ಕೆ.ಆರ್.ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರಿಗೆ ಪತ್ನಿ ರಂಜಿತ ಮತ್ತು ಇಬ್ಬರು ಪುಟ್ಟ ಹೆಣ್ಣು ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಬನ್ನೂರಿನಲ್ಲಿ ನಡೆಯಿತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…