ಕೆ.ಎಂ ದೊಡ್ಡಿ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಮದ್ದೂರು ತಾಲೂಕಿನ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಠದ ಹೊನ್ನಾಯಕನಹಳ್ಳಿ ಗ್ರಾಮದ ಶ್ರೀ ಮಂಟೇಸ್ವಾಮಿ ಜಾತ್ರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
ಕೆ.ಎಂ ದೊಡ್ಡಿ ಸಮೀಪದ ಮಠದ ಹೊನ್ನನಾಯಕನಹಳ್ಳಿಯಲ್ಲಿ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವವು ಮಂಟೇಸ್ವಾಮಿ ಕಪ್ಪಡಿ ರಾಚಪ್ಪಾಜಿ ಮಠದ ಮಠಾಧೀಪತಿಗಳಾದ ವರ್ಚಸ್ವಿ ಸಿದ್ದಲಿಂಗರಾಜೇಅರಸ್ ಅವರ ದಿವ್ಯ ಸಾನಿಧ್ಯದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.
ಸಾಂಪ್ರಾದಾಯಿಕವಾಗಿ ವಿಶ್ವಕರ್ಮ ಸಮುದಾಯದವರಿಂದ ನಡೆದ ದೀಪಾವಳಿ ಜಾತ್ರೆಯ ವಿಶೇಷವಾಗಿ ಮಂಟೇಸ್ವಾಮಿ, ಸಿದ್ದಪ್ಪಾಜಿ, ಬಸಪ್ಪ ದೇವರಿಗೆ ಹೋಮ ಹವನ ಸೇರಿದಂತೆ ಪೂಜಾ ಕೈಂಕರ್ಯಗಳು ಮುಂಜಾನೆಯಿಂದಲೆ ಜರುಗಿತು. ಗ್ರಾಮದ ಹೊರವಲಯದಲ್ಲಿರುವ ದೊಡ್ಡ ಕೆರೆ ಸಮೀಪ ಮಂಟೇಸ್ವಾಮಿ ಬಸಪ್ಪ, ಕಂಡಾಯ, ಬಿರುದು ದೇರಿದಂತೆ ವಿವಿಧ ದೇವತೆಗಳ ಹೂವು ಹೊಂಬಾಳೆ ಕಾರ್ಯಕ್ರಮವು ಭಕ್ತಿ ಪ್ರಧಾನವಾಗಿ ನೆರವೇರಿಸಲಾಯಿತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯ ಹಾಗೂ ಬಸವಪ್ಪ ಮೆರವಣಿಗೆ ರಾತ್ರಿಯಿಡಿ ನಡೆಯಿತು.
ಇದನ್ನು ಓದಿ: ಮಲೇಷ್ಯಾ ಆಸಿಯಾನ್ ಶೃಂಗ ಸಭೆ : ವರ್ಚುವಲ್ ಆಗಿ ಮೋದಿ ಭಾಗಿ
ದೇವಾಲಯದ ಇತಿಹಾಸ, ಮಂಟೇಸ್ವಾಮಿ ಹೆಸರು ನಾಮಕರಣಗೊಂಡ ಸ್ಥಳ:-
ಧರೆಗೆ ದೊಡ್ಡವರು ತಮ್ಮ ಶಿಷ್ಯರೊಡಗೂಡಿ ದಕ್ಷಿಣಾಭಿಮುಖವಾಗಿ ಆಗಮಿಸುವ ವೇಳೆ ಆದಿಹೊನ್ನಾಯಕನಹಳ್ಳಿಗೆ ಬರುತ್ತಾರೆ. ಅಲ್ಲಿ ತಮ್ಮ ಶಿಷ್ಯರನ್ನೆಲ್ಲ ಒಂದೆಡೆ ಬಿಟ್ಟು ಬಳೆ ಮುದ್ದಮ್ಮ ಎಂಬಾಕೆಯ ಮನೆಯ ಮುಂದೆ ಕೋರಣ್ಯದ ಭಿಕ್ಷಕ್ಕಾಗಿ ಬರುತ್ತಾರೆ. ಮುದ್ದಮ್ಮ ಹಟ್ಟಿಯಲ್ಲಿ ಆಗ ಹಾಲು ಕರೆಯುತ್ತಿರುತ್ತಾಳೆ. ಕಾಲಲ್ಲಿ ಜಂಗು, ಕೈಯಲ್ಲಿ ಕಂಡಾಯ ಹಿಡಿದು ಶಬ್ದ ಮಾಡಿಕೊಂಡು ಬಂದ ಧರೆಗೆ ದೊಡ್ಡವರನ್ನು ನೋಡಿ ಹಸು ಬೆದರಿ ಹಾಲಿನ ತಂಬಿಗೆಯನ್ನು ಒದೆಯುತ್ತದೆ. ಮುದ್ದಮ್ಮ ಸಿಟ್ಟಾಗಿ ಹಾಳಾದ ಮಂಟೋದಯ್ಯ ಮುಂದೆ ಹೋಗು ಎಂದು ನುಡಿಯುತ್ತಾಳೆ. ಹೆಸರಿಲ್ಲದ ನನಗೆ ಹೆಸರು ಕಟ್ಟಿದ್ದೀಯಾ ತಾಯಿ ಮುಂದೆ ಮಂಟೆಲಿಂಗಯ್ಯ ಎಂಬ ಹೆಸರು ನಾಮಕರಣವಾಗಲಿ ಎಂದು ಹೇಳಿ ಹೊನ್ನಾಯಕನಹಳ್ಳಿಯಲ್ಲಿ ಮುದ್ದಮ್ಮ ವಾಸವಿದ್ದ ಸ್ಥಳ ಇಂದು ಮಂಟೇಸ್ವಾಮಿ ಮಠವಾಗಿ ಸಾಂಪ್ರದಾಯಿಕವಾಗಿ ಮುಂದುವರೆಯುತ್ತಿದೆ.
ಗ್ರಾಮದಲ್ಲಿ ಆಕರ್ಷಕವಾದ ವಿದ್ಯುತ್ದೀಪಾಲಾಂಕಾರ
ದೀಪಾವಳಿ ಹಬ್ಬದ ಅಂಗವಾಗಿ ಹೊನ್ನಾಯಕನಹಳ್ಳಿ ಗ್ರಾಮದ ಉದ್ದಕ್ಕೂ ಹಸಿರು ತಳಿರು ತೋರಣದ ಜೊತೆಗೆ ಜಗಜಗಿಸುವ ವಿವಿಧ ಬಣ್ಣದ ವಿದ್ಯುತ್ ದೀಪಾಲಾಂಕಾರ ಮಾಡಲಾಗಿತ್ತು. ದೇವಸ್ಥಾನವನ್ನು ವಿವಿಧ ಹೂವುಗಳಿಂದ ಆಲಂಕರಿಸಲಾಗಿತ್ತು ಹೊರ ಜಿಲ್ಲೆ ಹಾಗೂ ಗ್ರಾಮಗಳಿಂದ ಅಗಮಿಸಿದ ಭಕ್ತರನ್ನ ಆಕರ್ಷಕವಾಗಿ ಮನಸೊರಗೊಳಿಸಿತು.
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್ನ ಬೀದಿ ಬೀದಿಗಳಲ್ಲಿ ಬೆಂಕಿ…
ಪಾಂಡವಪುರ: ಸ್ಯಾಂಡಲ್ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…
ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…
ಬೆಂಗಳೂರು: ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…