ಮಂಡ್ಯ

ವಿಜೃಂಭಣೆಯಿಂದ ಜರುಗಿದ ಮಂಟೇಸ್ವಾಮಿ ಜಾತ್ರಾ ಮಹೋತ್ಸವ

ಕೆ.ಎಂ ದೊಡ್ಡಿ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಮದ್ದೂರು ತಾಲೂಕಿನ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಠದ ಹೊನ್ನಾಯಕನಹಳ್ಳಿ ಗ್ರಾಮದ ಶ್ರೀ ಮಂಟೇಸ್ವಾಮಿ ಜಾತ್ರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.

ಕೆ.ಎಂ ದೊಡ್ಡಿ ಸಮೀಪದ ಮಠದ ಹೊನ್ನನಾಯಕನಹಳ್ಳಿಯಲ್ಲಿ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವವು ಮಂಟೇಸ್ವಾಮಿ ಕಪ್ಪಡಿ ರಾಚಪ್ಪಾಜಿ ಮಠದ ಮಠಾಧೀಪತಿಗಳಾದ ವರ್ಚಸ್ವಿ ಸಿದ್ದಲಿಂಗರಾಜೇಅರಸ್ ಅವರ ದಿವ್ಯ ಸಾನಿಧ್ಯದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.

ಸಾಂಪ್ರಾದಾಯಿಕವಾಗಿ ವಿಶ್ವಕರ್ಮ ಸಮುದಾಯದವರಿಂದ ನಡೆದ ದೀಪಾವಳಿ ಜಾತ್ರೆಯ ವಿಶೇಷವಾಗಿ ಮಂಟೇಸ್ವಾಮಿ, ಸಿದ್ದಪ್ಪಾಜಿ, ಬಸಪ್ಪ ದೇವರಿಗೆ ಹೋಮ ಹವನ ಸೇರಿದಂತೆ ಪೂಜಾ ಕೈಂಕರ್ಯಗಳು ಮುಂಜಾನೆಯಿಂದಲೆ ಜರುಗಿತು. ಗ್ರಾಮದ ಹೊರವಲಯದಲ್ಲಿರುವ ದೊಡ್ಡ ಕೆರೆ ಸಮೀಪ ಮಂಟೇಸ್ವಾಮಿ ಬಸಪ್ಪ, ಕಂಡಾಯ, ಬಿರುದು ದೇರಿದಂತೆ ವಿವಿಧ ದೇವತೆಗಳ ಹೂವು ಹೊಂಬಾಳೆ ಕಾರ್ಯಕ್ರಮವು ಭಕ್ತಿ ಪ್ರಧಾನವಾಗಿ ನೆರವೇರಿಸಲಾಯಿತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯ ಹಾಗೂ ಬಸವಪ್ಪ ಮೆರವಣಿಗೆ ರಾತ್ರಿಯಿಡಿ ನಡೆಯಿತು.

ಇದನ್ನು ಓದಿ: ಮಲೇಷ್ಯಾ ಆಸಿಯಾನ್ ಶೃಂಗ ಸಭೆ : ವರ್ಚುವಲ್ ಆಗಿ ಮೋದಿ ಭಾಗಿ

ದೇವಾಲಯದ ಇತಿಹಾಸ, ಮಂಟೇಸ್ವಾಮಿ ಹೆಸರು ನಾಮಕರಣಗೊಂಡ ಸ್ಥಳ:-
ಧರೆಗೆ ದೊಡ್ಡವರು ತಮ್ಮ ಶಿಷ್ಯರೊಡಗೂಡಿ ದಕ್ಷಿಣಾಭಿಮುಖವಾಗಿ ಆಗಮಿಸುವ ವೇಳೆ ಆದಿಹೊನ್ನಾಯಕನಹಳ್ಳಿಗೆ ಬರುತ್ತಾರೆ. ಅಲ್ಲಿ ತಮ್ಮ ಶಿಷ್ಯರನ್ನೆಲ್ಲ ಒಂದೆಡೆ ಬಿಟ್ಟು ಬಳೆ ಮುದ್ದಮ್ಮ ಎಂಬಾಕೆಯ ಮನೆಯ ಮುಂದೆ ಕೋರಣ್ಯದ ಭಿಕ್ಷಕ್ಕಾಗಿ ಬರುತ್ತಾರೆ. ಮುದ್ದಮ್ಮ ಹಟ್ಟಿಯಲ್ಲಿ ಆಗ ಹಾಲು ಕರೆಯುತ್ತಿರುತ್ತಾಳೆ. ಕಾಲಲ್ಲಿ ಜಂಗು, ಕೈಯಲ್ಲಿ ಕಂಡಾಯ ಹಿಡಿದು ಶಬ್ದ ಮಾಡಿಕೊಂಡು ಬಂದ ಧರೆಗೆ ದೊಡ್ಡವರನ್ನು ನೋಡಿ ಹಸು ಬೆದರಿ ಹಾಲಿನ ತಂಬಿಗೆಯನ್ನು ಒದೆಯುತ್ತದೆ. ಮುದ್ದಮ್ಮ ಸಿಟ್ಟಾಗಿ ಹಾಳಾದ ಮಂಟೋದಯ್ಯ ಮುಂದೆ ಹೋಗು ಎಂದು ನುಡಿಯುತ್ತಾಳೆ. ಹೆಸರಿಲ್ಲದ ನನಗೆ ಹೆಸರು ಕಟ್ಟಿದ್ದೀಯಾ ತಾಯಿ ಮುಂದೆ ಮಂಟೆಲಿಂಗಯ್ಯ ಎಂಬ ಹೆಸರು ನಾಮಕರಣವಾಗಲಿ ಎಂದು ಹೇಳಿ ಹೊನ್ನಾಯಕನಹಳ್ಳಿಯಲ್ಲಿ ಮುದ್ದಮ್ಮ ವಾಸವಿದ್ದ ಸ್ಥಳ ಇಂದು ಮಂಟೇಸ್ವಾಮಿ ಮಠವಾಗಿ ಸಾಂಪ್ರದಾಯಿಕವಾಗಿ ಮುಂದುವರೆಯುತ್ತಿದೆ.

ಗ್ರಾಮದಲ್ಲಿ ಆಕರ್ಷಕವಾದ ವಿದ್ಯುತ್‌ದೀಪಾಲಾಂಕಾರ
ದೀಪಾವಳಿ ಹಬ್ಬದ ಅಂಗವಾಗಿ ಹೊನ್ನಾಯಕನಹಳ್ಳಿ ಗ್ರಾಮದ ಉದ್ದಕ್ಕೂ ಹಸಿರು ತಳಿರು ತೋರಣದ ಜೊತೆಗೆ ಜಗಜಗಿಸುವ ವಿವಿಧ ಬಣ್ಣದ ವಿದ್ಯುತ್ ದೀಪಾಲಾಂಕಾರ ಮಾಡಲಾಗಿತ್ತು. ದೇವಸ್ಥಾನವನ್ನು ವಿವಿಧ ಹೂವುಗಳಿಂದ ಆಲಂಕರಿಸಲಾಗಿತ್ತು ಹೊರ ಜಿಲ್ಲೆ ಹಾಗೂ ಗ್ರಾಮಗಳಿಂದ ಅಗಮಿಸಿದ ಭಕ್ತರನ್ನ ಆಕರ್ಷಕವಾಗಿ ಮನಸೊರಗೊಳಿಸಿತು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

1 hour ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

2 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

2 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

2 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

2 hours ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

2 hours ago