ಮಂಡ್ಯ

ವಿಜೃಂಭಣೆಯಿಂದ ಜರುಗಿದ ಮಂಟೇಸ್ವಾಮಿ ಜಾತ್ರಾ ಮಹೋತ್ಸವ

ಕೆ.ಎಂ ದೊಡ್ಡಿ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಮದ್ದೂರು ತಾಲೂಕಿನ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಠದ ಹೊನ್ನಾಯಕನಹಳ್ಳಿ ಗ್ರಾಮದ ಶ್ರೀ ಮಂಟೇಸ್ವಾಮಿ ಜಾತ್ರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.

ಕೆ.ಎಂ ದೊಡ್ಡಿ ಸಮೀಪದ ಮಠದ ಹೊನ್ನನಾಯಕನಹಳ್ಳಿಯಲ್ಲಿ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವವು ಮಂಟೇಸ್ವಾಮಿ ಕಪ್ಪಡಿ ರಾಚಪ್ಪಾಜಿ ಮಠದ ಮಠಾಧೀಪತಿಗಳಾದ ವರ್ಚಸ್ವಿ ಸಿದ್ದಲಿಂಗರಾಜೇಅರಸ್ ಅವರ ದಿವ್ಯ ಸಾನಿಧ್ಯದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.

ಸಾಂಪ್ರಾದಾಯಿಕವಾಗಿ ವಿಶ್ವಕರ್ಮ ಸಮುದಾಯದವರಿಂದ ನಡೆದ ದೀಪಾವಳಿ ಜಾತ್ರೆಯ ವಿಶೇಷವಾಗಿ ಮಂಟೇಸ್ವಾಮಿ, ಸಿದ್ದಪ್ಪಾಜಿ, ಬಸಪ್ಪ ದೇವರಿಗೆ ಹೋಮ ಹವನ ಸೇರಿದಂತೆ ಪೂಜಾ ಕೈಂಕರ್ಯಗಳು ಮುಂಜಾನೆಯಿಂದಲೆ ಜರುಗಿತು. ಗ್ರಾಮದ ಹೊರವಲಯದಲ್ಲಿರುವ ದೊಡ್ಡ ಕೆರೆ ಸಮೀಪ ಮಂಟೇಸ್ವಾಮಿ ಬಸಪ್ಪ, ಕಂಡಾಯ, ಬಿರುದು ದೇರಿದಂತೆ ವಿವಿಧ ದೇವತೆಗಳ ಹೂವು ಹೊಂಬಾಳೆ ಕಾರ್ಯಕ್ರಮವು ಭಕ್ತಿ ಪ್ರಧಾನವಾಗಿ ನೆರವೇರಿಸಲಾಯಿತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯ ಹಾಗೂ ಬಸವಪ್ಪ ಮೆರವಣಿಗೆ ರಾತ್ರಿಯಿಡಿ ನಡೆಯಿತು.

ಇದನ್ನು ಓದಿ: ಮಲೇಷ್ಯಾ ಆಸಿಯಾನ್ ಶೃಂಗ ಸಭೆ : ವರ್ಚುವಲ್ ಆಗಿ ಮೋದಿ ಭಾಗಿ

ದೇವಾಲಯದ ಇತಿಹಾಸ, ಮಂಟೇಸ್ವಾಮಿ ಹೆಸರು ನಾಮಕರಣಗೊಂಡ ಸ್ಥಳ:-
ಧರೆಗೆ ದೊಡ್ಡವರು ತಮ್ಮ ಶಿಷ್ಯರೊಡಗೂಡಿ ದಕ್ಷಿಣಾಭಿಮುಖವಾಗಿ ಆಗಮಿಸುವ ವೇಳೆ ಆದಿಹೊನ್ನಾಯಕನಹಳ್ಳಿಗೆ ಬರುತ್ತಾರೆ. ಅಲ್ಲಿ ತಮ್ಮ ಶಿಷ್ಯರನ್ನೆಲ್ಲ ಒಂದೆಡೆ ಬಿಟ್ಟು ಬಳೆ ಮುದ್ದಮ್ಮ ಎಂಬಾಕೆಯ ಮನೆಯ ಮುಂದೆ ಕೋರಣ್ಯದ ಭಿಕ್ಷಕ್ಕಾಗಿ ಬರುತ್ತಾರೆ. ಮುದ್ದಮ್ಮ ಹಟ್ಟಿಯಲ್ಲಿ ಆಗ ಹಾಲು ಕರೆಯುತ್ತಿರುತ್ತಾಳೆ. ಕಾಲಲ್ಲಿ ಜಂಗು, ಕೈಯಲ್ಲಿ ಕಂಡಾಯ ಹಿಡಿದು ಶಬ್ದ ಮಾಡಿಕೊಂಡು ಬಂದ ಧರೆಗೆ ದೊಡ್ಡವರನ್ನು ನೋಡಿ ಹಸು ಬೆದರಿ ಹಾಲಿನ ತಂಬಿಗೆಯನ್ನು ಒದೆಯುತ್ತದೆ. ಮುದ್ದಮ್ಮ ಸಿಟ್ಟಾಗಿ ಹಾಳಾದ ಮಂಟೋದಯ್ಯ ಮುಂದೆ ಹೋಗು ಎಂದು ನುಡಿಯುತ್ತಾಳೆ. ಹೆಸರಿಲ್ಲದ ನನಗೆ ಹೆಸರು ಕಟ್ಟಿದ್ದೀಯಾ ತಾಯಿ ಮುಂದೆ ಮಂಟೆಲಿಂಗಯ್ಯ ಎಂಬ ಹೆಸರು ನಾಮಕರಣವಾಗಲಿ ಎಂದು ಹೇಳಿ ಹೊನ್ನಾಯಕನಹಳ್ಳಿಯಲ್ಲಿ ಮುದ್ದಮ್ಮ ವಾಸವಿದ್ದ ಸ್ಥಳ ಇಂದು ಮಂಟೇಸ್ವಾಮಿ ಮಠವಾಗಿ ಸಾಂಪ್ರದಾಯಿಕವಾಗಿ ಮುಂದುವರೆಯುತ್ತಿದೆ.

ಗ್ರಾಮದಲ್ಲಿ ಆಕರ್ಷಕವಾದ ವಿದ್ಯುತ್‌ದೀಪಾಲಾಂಕಾರ
ದೀಪಾವಳಿ ಹಬ್ಬದ ಅಂಗವಾಗಿ ಹೊನ್ನಾಯಕನಹಳ್ಳಿ ಗ್ರಾಮದ ಉದ್ದಕ್ಕೂ ಹಸಿರು ತಳಿರು ತೋರಣದ ಜೊತೆಗೆ ಜಗಜಗಿಸುವ ವಿವಿಧ ಬಣ್ಣದ ವಿದ್ಯುತ್ ದೀಪಾಲಾಂಕಾರ ಮಾಡಲಾಗಿತ್ತು. ದೇವಸ್ಥಾನವನ್ನು ವಿವಿಧ ಹೂವುಗಳಿಂದ ಆಲಂಕರಿಸಲಾಗಿತ್ತು ಹೊರ ಜಿಲ್ಲೆ ಹಾಗೂ ಗ್ರಾಮಗಳಿಂದ ಅಗಮಿಸಿದ ಭಕ್ತರನ್ನ ಆಕರ್ಷಕವಾಗಿ ಮನಸೊರಗೊಳಿಸಿತು.

ಆಂದೋಲನ ಡೆಸ್ಕ್

Recent Posts

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

23 mins ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

54 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

57 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

2 hours ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

2 hours ago