ಮಂಡ್ಯ

ವಿಜೃಂಭಣೆಯಿಂದ ಜರುಗಿದ ಮಂಟೇಸ್ವಾಮಿ ಜಾತ್ರಾ ಮಹೋತ್ಸವ

ಕೆ.ಎಂ ದೊಡ್ಡಿ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಮದ್ದೂರು ತಾಲೂಕಿನ ಸುಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಮಠದ ಹೊನ್ನಾಯಕನಹಳ್ಳಿ ಗ್ರಾಮದ ಶ್ರೀ ಮಂಟೇಸ್ವಾಮಿ ಜಾತ್ರಾ ಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.

ಕೆ.ಎಂ ದೊಡ್ಡಿ ಸಮೀಪದ ಮಠದ ಹೊನ್ನನಾಯಕನಹಳ್ಳಿಯಲ್ಲಿ ಮಂಟೇಸ್ವಾಮಿ ದೀಪಾವಳಿ ಜಾತ್ರಾ ಮಹೋತ್ಸವವು ಮಂಟೇಸ್ವಾಮಿ ಕಪ್ಪಡಿ ರಾಚಪ್ಪಾಜಿ ಮಠದ ಮಠಾಧೀಪತಿಗಳಾದ ವರ್ಚಸ್ವಿ ಸಿದ್ದಲಿಂಗರಾಜೇಅರಸ್ ಅವರ ದಿವ್ಯ ಸಾನಿಧ್ಯದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.

ಸಾಂಪ್ರಾದಾಯಿಕವಾಗಿ ವಿಶ್ವಕರ್ಮ ಸಮುದಾಯದವರಿಂದ ನಡೆದ ದೀಪಾವಳಿ ಜಾತ್ರೆಯ ವಿಶೇಷವಾಗಿ ಮಂಟೇಸ್ವಾಮಿ, ಸಿದ್ದಪ್ಪಾಜಿ, ಬಸಪ್ಪ ದೇವರಿಗೆ ಹೋಮ ಹವನ ಸೇರಿದಂತೆ ಪೂಜಾ ಕೈಂಕರ್ಯಗಳು ಮುಂಜಾನೆಯಿಂದಲೆ ಜರುಗಿತು. ಗ್ರಾಮದ ಹೊರವಲಯದಲ್ಲಿರುವ ದೊಡ್ಡ ಕೆರೆ ಸಮೀಪ ಮಂಟೇಸ್ವಾಮಿ ಬಸಪ್ಪ, ಕಂಡಾಯ, ಬಿರುದು ದೇರಿದಂತೆ ವಿವಿಧ ದೇವತೆಗಳ ಹೂವು ಹೊಂಬಾಳೆ ಕಾರ್ಯಕ್ರಮವು ಭಕ್ತಿ ಪ್ರಧಾನವಾಗಿ ನೆರವೇರಿಸಲಾಯಿತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಂಡಾಯ ಹಾಗೂ ಬಸವಪ್ಪ ಮೆರವಣಿಗೆ ರಾತ್ರಿಯಿಡಿ ನಡೆಯಿತು.

ಇದನ್ನು ಓದಿ: ಮಲೇಷ್ಯಾ ಆಸಿಯಾನ್ ಶೃಂಗ ಸಭೆ : ವರ್ಚುವಲ್ ಆಗಿ ಮೋದಿ ಭಾಗಿ

ದೇವಾಲಯದ ಇತಿಹಾಸ, ಮಂಟೇಸ್ವಾಮಿ ಹೆಸರು ನಾಮಕರಣಗೊಂಡ ಸ್ಥಳ:-
ಧರೆಗೆ ದೊಡ್ಡವರು ತಮ್ಮ ಶಿಷ್ಯರೊಡಗೂಡಿ ದಕ್ಷಿಣಾಭಿಮುಖವಾಗಿ ಆಗಮಿಸುವ ವೇಳೆ ಆದಿಹೊನ್ನಾಯಕನಹಳ್ಳಿಗೆ ಬರುತ್ತಾರೆ. ಅಲ್ಲಿ ತಮ್ಮ ಶಿಷ್ಯರನ್ನೆಲ್ಲ ಒಂದೆಡೆ ಬಿಟ್ಟು ಬಳೆ ಮುದ್ದಮ್ಮ ಎಂಬಾಕೆಯ ಮನೆಯ ಮುಂದೆ ಕೋರಣ್ಯದ ಭಿಕ್ಷಕ್ಕಾಗಿ ಬರುತ್ತಾರೆ. ಮುದ್ದಮ್ಮ ಹಟ್ಟಿಯಲ್ಲಿ ಆಗ ಹಾಲು ಕರೆಯುತ್ತಿರುತ್ತಾಳೆ. ಕಾಲಲ್ಲಿ ಜಂಗು, ಕೈಯಲ್ಲಿ ಕಂಡಾಯ ಹಿಡಿದು ಶಬ್ದ ಮಾಡಿಕೊಂಡು ಬಂದ ಧರೆಗೆ ದೊಡ್ಡವರನ್ನು ನೋಡಿ ಹಸು ಬೆದರಿ ಹಾಲಿನ ತಂಬಿಗೆಯನ್ನು ಒದೆಯುತ್ತದೆ. ಮುದ್ದಮ್ಮ ಸಿಟ್ಟಾಗಿ ಹಾಳಾದ ಮಂಟೋದಯ್ಯ ಮುಂದೆ ಹೋಗು ಎಂದು ನುಡಿಯುತ್ತಾಳೆ. ಹೆಸರಿಲ್ಲದ ನನಗೆ ಹೆಸರು ಕಟ್ಟಿದ್ದೀಯಾ ತಾಯಿ ಮುಂದೆ ಮಂಟೆಲಿಂಗಯ್ಯ ಎಂಬ ಹೆಸರು ನಾಮಕರಣವಾಗಲಿ ಎಂದು ಹೇಳಿ ಹೊನ್ನಾಯಕನಹಳ್ಳಿಯಲ್ಲಿ ಮುದ್ದಮ್ಮ ವಾಸವಿದ್ದ ಸ್ಥಳ ಇಂದು ಮಂಟೇಸ್ವಾಮಿ ಮಠವಾಗಿ ಸಾಂಪ್ರದಾಯಿಕವಾಗಿ ಮುಂದುವರೆಯುತ್ತಿದೆ.

ಗ್ರಾಮದಲ್ಲಿ ಆಕರ್ಷಕವಾದ ವಿದ್ಯುತ್‌ದೀಪಾಲಾಂಕಾರ
ದೀಪಾವಳಿ ಹಬ್ಬದ ಅಂಗವಾಗಿ ಹೊನ್ನಾಯಕನಹಳ್ಳಿ ಗ್ರಾಮದ ಉದ್ದಕ್ಕೂ ಹಸಿರು ತಳಿರು ತೋರಣದ ಜೊತೆಗೆ ಜಗಜಗಿಸುವ ವಿವಿಧ ಬಣ್ಣದ ವಿದ್ಯುತ್ ದೀಪಾಲಾಂಕಾರ ಮಾಡಲಾಗಿತ್ತು. ದೇವಸ್ಥಾನವನ್ನು ವಿವಿಧ ಹೂವುಗಳಿಂದ ಆಲಂಕರಿಸಲಾಗಿತ್ತು ಹೊರ ಜಿಲ್ಲೆ ಹಾಗೂ ಗ್ರಾಮಗಳಿಂದ ಅಗಮಿಸಿದ ಭಕ್ತರನ್ನ ಆಕರ್ಷಕವಾಗಿ ಮನಸೊರಗೊಳಿಸಿತು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago