ಮಂಡ್ಯ

ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶಿಕ್ಷಕ ಮತದಾರರು ಸೋತಿದ್ದಾರೆ: ಮರಿತಿಬ್ಬೇಗೌಡ

ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ನಾನು ಸೋತಿಲ್ಲ. ಬದಲಾಗಿ ಸೋತಿರುವುದು ಶಿಕ್ಷಕ ಮತದಾರರು. ಈ ಬಗ್ಗೆ ಅವರು ಆತ್ಮ ವಿಮರ್ಶೆ ಮಾಡುಕೊಳ್ಳುವ ಕಾಲ ಬಂದಿದೆ ಎಂದು ವಿಧಾನ ಪರಿಷತ್‌ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 24 ವರ್ಷಗಳ ಕಾಲ ನಾನು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸಿದ ಅದರ ಘನತೆಯನ್ನು ಕಾಪಾಡಿದ್ದೇನೆ. ಆದರೆ ಈ ಚುನಾವಣೆ ಫಲಿತಾಂಶ ಶಿಕ್ಷಕರ ಕ್ಷೇತ್ರಕ್ಕೆ ಕಳಂಕ ತಂದಿದೆ ಎಂದು ವಿಷಾಧಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಹಜ. ಆದರೆ ಆಡಳಿತ ಪಕ್ಷದ ಅಭ್ಯರ್ಥಿಯ ಸೋಲನ್ನು ಶಿಕ್ಷಕರು ಬಯಸಿರುವುದು ವಿಷಾದನೀಯ ಎಂದು ನುಡಿದರು.

ಆಡಳಿತ ಪಕ್ಷದ ಅಭ್ಯರ್ಥಿಯಾಗಿದ್ದೇನೆ. ನಮ್ಮ ಸರ್ಕಾರ ಮುಂದಿನ ಐದು ವರ್ಷಗಳು ನಾವು ಅಧಿಕಾರದಲ್ಲಿರುತ್ತೇವೆ. ಶಿಕ್ಷಕರು ಮತ್ತು ದೀರ್ಘಕಾಲದ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿದ್ದೆ. ಇದಕ್ಕಾಗಿ ನನ್ನನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದೆ ಹಾಗಿದ್ದರೂ ನನ್ನನ್ನು ಸೋಲಿಸಿದರು ಎಂದರು.

ನಾನು ಜೆಡಿಎಸ್‌ ಬಿಟ್ಟಿದ್ದು, ಚುನಾವಣಾ ಸೋಲಿಗೆ ಕಾರಣಲ್ಲ. ಮೂರು ವರ್ಷಗಳ ಹಿಂದೆಯೇ ಅವರಿಂದ ಅಂತರ ಕಾಯ್ದುಕೊಂಡು ಚುನಾವಣೆ ಎದುರಿಸಿದ್ದೇನೆ. ಜೆಡಿಎಸ್‌ ಅಥವಾ ವರಿಷ್ಠರ ಪ್ರಭಾವ ಈ ಚುನಾವಣೆ ಮೇಲೆ ಬೀರಿಲ್ಲ ಎಂದು ಟಾಂಗ್‌ ಕೊಟ್ಟರು.

ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಕೆಶಿ, ಚೆಲುವರಾಯಸ್ವಾಮಿ ಸೇರಿದಂತೆ ಮೈಸೂರು ಮಂಡ್ಯ, ಚಾಮರಾಜನಗರ ಉಸ್ತುವಾರಿ ಸಚಿವರು ಪ್ರಯತ್ನಿಸಿದರು ನಾನು ಗೆಲ್ಲಲು ಸಾಧ್ಯವಾಗಲಿಲ್ಲ. ಮತ ನೀಡಿದ ಶಿಕ್ಷಕ ಪ್ರಭುಗಳಿಗೆ ನನ್ನ ಕೃತಜ್ಞತೆಗಳು ಎಂದು ಮರಿತಿಬ್ಬೇಗೌಡ ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

38 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago