ಮಂಡ್ಯ: ಮಂಡ್ಯ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭಕ್ತರ ಹಿಂಡೆ ಬರುತ್ತಿದ್ದು, ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಪಾಂಡುಪುರ ತಾಲೂಕಿನ ಮೇಲಕೋಟೆ ಚೆಲುವರಾಯಸ್ವಾಮಿ ದೇವಾಲಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.
ಐತಿಹಾಸಿಕ ಹಿನ್ನಲೆಯುಳ್ಳ ಈ ದೇವಾಲಯಕ್ಕೆ ವರ್ಷದ ಮೊಲದ ದಿನ ಸ್ವಾಮಿಯ ದರ್ಶನ ಪಡೆಯಲು ತಂಡೋಪ ತಂಡವಾಗಿ ಭಕ್ತರು ಆಗಮಿಸುತ್ತಿದ್ದಾರೆ. ಆದ್ರೆ ಅವರೆಲ್ಲರಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಭಕ್ತರು ಮಾಸ್ಕ್ ಧರಿಸಿ ದೇವರ ದರ್ಶನ ಪಡೆದಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ ಕೋವಿಡ್ ರೂಪಾಂತರಿ ಜೆಎನ್೧ ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮಾಸ್ಕ್ನ್ನು ದೇವಸ್ಥಾನದ ಆವರಣದಲ್ಲಿ ಕಡ್ಡಾಯಗೊಳಿಸಿ ಇಲ್ಲಿನ ಆಡಳಿತ ಮಂಡಳಿ ಅದೇಶ ನೀಡಿದೆ.
ದೇವಸ್ಥಾನಕ್ಕೆ ಆಗಮಿಸುವವರಿಗೆ ಮೊದಲು ಮಾಸ್ಕ್ ಚೆಕ್ ಮಾಡಿ ದೇವಾಲಯಕ್ಕೆ ಬಿಡುತ್ತಿದ್ದಾರೆ. ನಿನ್ನೆ ವರೆಗೂ ಮಾಸ್ಕ್ ಇಲ್ಲದೇ ದೇವರ ದರ್ಶನಕ್ಕೆ ಅವಕಾಶವಿತ್ತು. ಇಂದು ಹೊಸ ವರ್ಷದ ಮೊಲದ ದಿನವಾದ್ದರಿಂದ ರಾಜ್ಯದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಕೋವಿಡ್ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ.
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…
ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…