ಮಂಡ್ಯ

ಮೇಲುಕೋಟೆ ದೇವರ ದರ್ಶನಕ್ಕೆ ಮಾಸ್ಕ್‌ ಕಡ್ಡಾಯ!

ಮಂಡ್ಯ: ಮಂಡ್ಯ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭಕ್ತರ ಹಿಂಡೆ ಬರುತ್ತಿದ್ದು, ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಪಾಂಡುಪುರ ತಾಲೂಕಿನ ಮೇಲಕೋಟೆ ಚೆಲುವರಾಯಸ್ವಾಮಿ ದೇವಾಲಯದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.

ಐತಿಹಾಸಿಕ ಹಿನ್ನಲೆಯುಳ್ಳ ಈ ದೇವಾಲಯಕ್ಕೆ ವರ್ಷದ ಮೊಲದ ದಿನ ಸ್ವಾಮಿಯ ದರ್ಶನ ಪಡೆಯಲು ತಂಡೋಪ ತಂಡವಾಗಿ ಭಕ್ತರು ಆಗಮಿಸುತ್ತಿದ್ದಾರೆ. ಆದ್ರೆ ಅವರೆಲ್ಲರಿಗೂ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಭಕ್ತರು ಮಾಸ್ಕ್‌ ಧರಿಸಿ ದೇವರ ದರ್ಶನ ಪಡೆದಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯಾದ್ಯಂತ ಕೋವಿಡ್‌ ರೂಪಾಂತರಿ ಜೆಎನ್‌೧ ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಮಾಸ್ಕ್‌ನ್ನು ದೇವಸ್ಥಾನದ ಆವರಣದಲ್ಲಿ ಕಡ್ಡಾಯಗೊಳಿಸಿ ಇಲ್ಲಿನ ಆಡಳಿತ ಮಂಡಳಿ ಅದೇಶ ನೀಡಿದೆ.

ದೇವಸ್ಥಾನಕ್ಕೆ ಆಗಮಿಸುವವರಿಗೆ ಮೊದಲು ಮಾಸ್ಕ್‌ ಚೆಕ್‌ ಮಾಡಿ ದೇವಾಲಯಕ್ಕೆ ಬಿಡುತ್ತಿದ್ದಾರೆ. ನಿನ್ನೆ ವರೆಗೂ ಮಾಸ್ಕ್‌ ಇಲ್ಲದೇ ದೇವರ ದರ್ಶನಕ್ಕೆ ಅವಕಾಶವಿತ್ತು. ಇಂದು ಹೊಸ ವರ್ಷದ ಮೊಲದ ದಿನವಾದ್ದರಿಂದ ರಾಜ್ಯದ ನಾನಾ ಮೂಲೆಗಳಿಂದ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಕೋವಿಡ್‌ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago