ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಅವರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಮದ್ದೂರಿನಲ್ಲಿ ಐಬಿ ಸರ್ಕಲ್, ಪೇಟೆ ಬೀದಿ ಕೊಲ್ಲಿ ಸರ್ಕಲ್ನಿಂದ ಶಿಂಷಾ ನದಿಯವರೆಗೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ಸಾಗುತ್ತಿದೆ.
ಕೇಸರಿ ಧ್ವಜ ಹಿಡಿದು ಹಿಂದೂ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲುಮುಟ್ಟಿದ್ದು, ಹಲವು ಜಾನಪದ ಕಲಾತಂಡಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿವೆ.
ಮೆರವಣಿಗೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಹೆಜ್ಜೆ ಹೆಜ್ಜೆಗೂ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.
ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಅಶ್ವಥ್ ನಾರಾಯಣ್, ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಬೋಧಿಸಬೇಕೆಂದರೆ ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…