ಮಂಡ್ಯ

ಧರ್ಮಸ್ಥಳ ಅಪಪ್ರಚಾರ ಖಂಡಿಸಿ ಬೃಹತ್‌ ಪ್ರತಿಭಟನೆ : ಸುಳ್ಳು ಸುದ್ದಿ ಅಬ್ಬಿಸುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಮಂಡ್ಯ : ಜನರ ಆರಾಧ್ಯ ದೈವ ಶ್ರೀ ಮಂಜುನಾಥಸ್ವಾಮಿ ನೆಲೆಸಿರುವ ಧರ್ಮಸ್ಥಳದ ಬಗ್ಗೆ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಸುಳ್ಳು ಸುದ್ದಿಗಳು ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ಕ್ರಮಕೈಗೊಳ್ಳಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಜಮಾವಣೆಗೊಂಡ ಮಹಿಳೆಯರು ಹಾಗೂ ನೂರಾರು ಭಕ್ತರು, ಜಯಚಾಮರಾಜೇಂದ್ರ ಒಡೆಯರ್ ವೃತ್ತದ ವರೆಗೆ ಮೆರವಣಿಗೆಯಲ್ಲಿ ಸಾಗಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತು, ಕೆಲ ಕಿಡಿಗೇಡಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರಲ್ಲದೆ, ಯಾರೋ ಒಬ್ಬ ಅನಾಮಿಕ ತಾನು ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿದ್ದನ್ನೇ ನಂಬಿ ಸರ್ಕಾರ ಶೋಧ ನಡೆಸುತ್ತಿದೆ. ಎಸ್‌ಐಟಿ ತನಿಖಾ ತಂಡ ರಚಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಅನಾಮಿಕ ವ್ಯಕ್ತಿ ತೋರಿಸಿದ ೧೬ ಸ್ಥಳಗಳಲ್ಲೂ ಯಾವುದೇ ಶವಗಳಾಗಲಿ, ಅವುಗಳ ಅಸ್ಥಿಪಂಜರವಾಗಲಿ ಸಿಕ್ಕಿಲ್ಲ.

ಇದು ಅನ್ಯಧರ್ಮೀಯರು ಹಿಂದೂ ಧರ್ಮದ ಹೂಡಿರುವ ಕುತಂತ್ರವಾಗಿದ್ದು, ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ಮಾಡಲೆಂದೇ ಅನಾಮಿಕ ವ್ಯಕ್ತಿಯನ್ನು ಸೃಷ್ಟಿಸಲಾಗಿದೆ. ಅಲ್ಲದೆ, ಯೂಟ್ಯೂಬ್‌ನಲ್ಲಿ ಸಮೀರ್ ಎಂಬ ವ್ಯಕ್ತಿ ಧರ್ಮಸ್ಥಳ, ಧರ್ಮಾಧಿಕಾರಿಗಳು ಮತ್ತು ಕುಟುಂಬದ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾನೆ. ಅಲ್ಲದೆ, ಅನಾಮಿಕ ಮುಸುಕುಧಾರಿ ವ್ಯಕ್ತಿಯನ್ನು ಮೊದಲು ತನಿಖೆಗೊಳಪಡಿಸಿ ಸತ್ಯಾಸತ್ಯತೆ ತಿಳಿಯಬೇಕೆಂದು ಆಗ್ರಹಿಸಿದರು.

ಕೆಲವು ವರ್ಷಗಳಿಂದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಎಂ.ಡಿ.ಸಮೀರ್, ಸಂತೋಷ್ ಶೆಟ್ಟಿ, ಟಿ.ಜಯಂತ, ಅಜಯ್, ಅಂಚನ್ ಮತ್ತು ಅವನ ಸಹಚರರು ಸೇರಿಕೊಂಡು ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಡಿ.ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ಹೆಸರಿಗೆ ಕಳಂಕ ತರುವಂತಹ ಕೀಳುಮಟ್ಟದ ಭಾಷೆಯನ್ನು ಉಪಯೋಗಿಸಿ ವಿಡಿಯೋಗಳ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯವನ್ನು ಗುರಿಯಾಗಿಸಿಕೊಂಡು ಯಾವುದೇ ದಾಖಲೆಗಳಿಲ್ಲದೆ ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಶ್ರೀಕ್ಷೇತ್ರದ ಕೋಟ್ಯಂತರ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದರಿಂದಾಗಿ ಈಗಾಗಲೇ ಸಮಾಜದಲ್ಲಿ ಎರಡು ಬಣಗಳು ನಿರ್ಮಾಣವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಇದು ಮುಂದಿನ ದಿನಗಳಲ್ಲಿ ಈ ಪ್ರಕ್ರಿಯೆಯು ಸಮಾಜದಲ್ಲಿ ಉದ್ವಿಗ್ನತೆ ಮತ್ತು ಶಾಂತಿಭಂಗಕ್ಕೆ ಕಾರಣವಾಗಬಹುದಾಗಿದೆ.

ಅನಾಮಿಕ ವ್ಯಕ್ತಿಯೋರ್ವ ನೀಡಿದ ದೂರಿನ ಆಧಾರದಲ್ಲಿ ರಾಜ್ಯ ಸರ್ಕಾರವು ‘ವಿಶೇಷ ತನಿಖಾ ತಂಡ’ವನ್ನು ರಚಿಸಿ ತನಿಖೆ ನಡೆಸುತ್ತಿರುವುದನ್ನು ಶ್ರೀಕ್ಷೇತ್ರದ ಭಕ್ತವೃಂದದವರಾದ ನಾವೆಲ್ಲರೂ ಗೌರವದಿಂದ ಸ್ವಾಗತಿಸುತ್ತೇವೆ. ಆದರೆ, ಇದೀಗ ಅನಾಮಿಕ ದೂರುದಾರನನ್ನು ಬಳಸಿಕೊಂಡು ಶ್ರೀ ಕ್ಷೇತ್ರದ ಬಗ್ಗೆ ದಿನಕ್ಕೊಂದು ರೀತಿಯಲ್ಲಿ ತಮ್ಮ ಯೂಟ್ಯೂಬ್, ಫೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣದ ಮೂಲಕ ಸುಳ್ಳು ಮಾಹಿತಿಗಳನ್ನು ಭಿತ್ತರಿಸಿ ಸಾರ್ವಜನಿಕರಲ್ಲಿ ಗೊಂದಲವನ್ನು ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಜನಜಾಗೃತಿ ವೇದಿಕೆ ಅಧ್ಯಕ್ಷ ನಾಗಮಂಗಲ ಹನುಮಂತು, ತಗ್ಗಹಳ್ಳಿ ವೆಂಕಟೇಶ್, ಕಾರಸವಾಡಿ ಮಹದೇವ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ.ಸಿ.ರವೀಂದ್ರ, ಕಲ್ಲಹಳ್ಳಿ ಆನಂದ ಹಾಗೂ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago