Massive protest rally against voter fraud on August 5: Agriculture Minister N. Cheluvarayaswamy
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್.5ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್.5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಪ್ರತಿಭಟನೆಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಲಿದ್ದಾರೆ.
ಮಂಡ್ಯ ಜಿಲ್ಲೆಯಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಭಾಗವಹಿಸಬೇಕು. ಜಿಲ್ಲೆಯಿಂದ ಕನಿಷ್ಠ 5 ಸಾವಿರ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಸಾಧ್ಯವಾದಷ್ಟು ಯುವಕರು ಭಾಗಿಯಾಗಿ ರಾಷ್ಟ್ರದ ಸ್ಥಿತಿಗತಿಯ ಕುರಿತು ತಿಳಿದುಕೊಳ್ಳಬೇಕು ಎಂದರು.
ಯಾರ್ಲಿಯಲ್ಲಿ ರಾಹುಲ್ ಗಾಂಧಿಯವರು ಮತ ಕಳ್ಳತನದ ಕುರಿತಾಗಿ ಗಂಭೀರ ಚರ್ಚೆ ನಡೆಸಲಿದ್ದಾರೆ. ಮತ ಕಳ್ಳತನದ ಕುರಿತಾಗಿ ದಾಖಲೆಯ ಸಮೇತ ಸತ್ಯ ಬಿಚ್ಚಿಡಲಿದ್ದಾರೆ. ರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಚುನಾವಣಾ ಆಯೋಗ ಅದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಈ ಹಿಂದೆಯೂ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ್ದೇವೆ. ಆಗ ಯಾರು ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ. ನಮ್ಮವರು ಸ್ವಲ್ಪ ಉದಾಸೀನ ತೋರಿದ್ದರು. ಚುನಾವಣಾ ಆಯೋಗದಿಂದ ಆಕ್ರಮ ನಡೆಯಲ್ಲ ಎಂಬ ನಂಬಿಕೆ ಇತ್ತು. ಆದರೆ ಈಗ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂದು ಕಂಡು ಬಂದಿದೆ ಎಂದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…